ಸುಕ್ಷೇತ್ರ ಮುಗಳಖೋಡದಲ್ಲಿ ಇಂದಿನಿಂದ ಶ್ರೀ ರೇಣುಕಾದೇವಿ 26ನೇ ಜಾತ್ರಾ ಮಹೋತ್ಸವ
ಲೋಕದರ್ಶನ ವರದಿ
ಮುಗಳಖೋಡ,21: ರಾಯಬಾಗ ತಾಲೂಕಿನ ಸುಕ್ಷೇತ್ರ ಮುಗಳಖೋಡ ಪಟ್ಟಣದಲ್ಲಿ ಶ್ರೀ ರೇಣುಕಾದೇವಿ 26ನೇ ಜಾತ್ರಾ ಮಹೋತ್ಸವವು ಗುರವಾರ ದಿ 22 ರಿಂದ ಶುಕ್ರವಾರ ದಿ 23 ವರೆಗೆ ಅತಿ ವಿಜೃಂಭನೆಯಿಂದ ಜರುಗುವುದು.
ಗುರುವಾರ ದಿ 22 ರಂದು ಶ್ರೀ ಡಾ.ಮುರಘರಾಜೇಂದ್ರ ಮಹಾಸ್ವಾಮಿಗಳ ಹಸ್ತದಿಂದ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆಯುವುದು. ರಾತ್ರಿ 9 ಗಂಟೆಗೆ ಸ್ಥಳಿಯ ಮೇಳದವರಿಂದ ಆಧ್ಯಾತ್ಮ ವಿಷಯಗಳಿಂದ ಡೊಳ್ಳಿನ ಪದಗಳು ಚೌಡಕಿ ಪದಗಳು ನಡೆಯುವವು.
ಶುಕ್ರವಾರ ದಿ 23 ರಂದು ಮುಂಜಾನೆ 6 ಗಂಟೆಯಿಂದ ಶ್ರೀ ರೇಣುಕಾದೇವಿಗೆ ಮಹಾ ಅಭಿಷೇಕ ಪ್ರಾರಂಭವಾಗುವುದು. ನಂತರ 9 ಗಂಟೆಗೆ ಗ್ರಾಮದ ಸಕಲ ಭಕ್ತರು ಆರತಿ ಕುಂಭಗಳ ಸಕಲ ವಾದ್ಯ ವೈಭವಗಳೊಂದಿಗೆ ಶ್ರೀ ದೇವಿಯ ಭವ್ಯ ಮೆರಣಿಗೆ ನಡೆಯುವುದು. ಮಧ್ಯಾಹ್ನ 12 ಗಂಟೆಗೆ ದೇವಿಯ ಹಡ್ಲಗಿ ತುಂಬುವ ಕಾರ್ಯಕ್ರಮ ನಡೆಯುವುದು. ನಂತರ 01 ಗಂಟೆಯಿಂದ ಮಹಾಪ್ರಸಾದ ನಡೆಯುವುದು. ರಾತ್ರಿ 10 ಗಂಟೆಗೆ ಮದರಖಂಡಿಯ ಶ್ರೀ ಮಲ್ಲಿಕಾಜರ್ುನ ಪ್ರಸಾದಿತ ನಾಟ್ಯ ಸಂಘದಿಂದ "ಸಂಪೂರ್ಣ ಹೇಮರೆಡ್ಡಿ ಮಲ್ಲಮ್ಮ ಎಂಬ ಭಕ್ತಿ ಪ್ರದಾನ ನಾಟಕ ನಡೆಯುವುದು. ಪಟ್ಟಣದ ಎಲ್ಲ ಸದ್ಭಕ್ತರು ಈ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಕಮೀಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 