ಹೇಮಾವತಿ ಅಮ್ಮನವರ ಜನ್ಮದಿನದ ಪ್ರಯುಕ್ತ ಹಣ್ಣು ಹಂಪಲ ವಿತರಣೆ
Fruit and vegetable distribution on the occasion of Hemavati Amma's birthday
ರಾಣೇಬೆನ್ನೂರ 04 : ವೀರೇಂದ್ರ ಹೆಗ್ಗಡೆ ಅವರ ಧರ್ಮಪತ್ನಿ ಹೇಮಾವತಿ ಅಮ್ಮನವರ ಜನ್ಮದಿನದ ಪ್ರಯುಕ್ತ ವಾತ್ಸಲ್ಯ ಯೋಜನೆಯಡಿ ಮನೆ ನಿರ್ಮಾಣ ಮಾಡಿರುವ ಹಾಗೂ ಅಸಹಾಯಕ ಸದಸ್ಯರುಗಳಿಗೆ ತಾಲೂಕಿನ ಹೊಳೆ ಆನ್ವೇರಿ ಗ್ರಾಮದಲ್ಲಿ ಹಣ್ಣು ಹಂಪಲ ವಿತರಿಸಲಾಯಿತು. ತಾಲೂಕ ಯೋಜನಾಧಿಕಾರಿ ಮಂಜುನಾಥಗೌಡ ಎಂ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ವಿಭಿನ್ನ ಹಾಗೂ ವಿಶೇಷ ಯೋಜನೆಗಳನ್ನು ರೂಪಿಸಿ ಎಲ್ಲ ವರ್ಗದವರಿಗೂ ಅದರಲ್ಲೂ ನಿರ್ಗತಿಕರಿಗೂ ವಿಶೇಷ ಕಾಳಜಿವಹಿಸುತ್ತಾ ಅವರ ನೆಮ್ಮದಿಯ ಜೀವನಕ್ಕೆ ಯೋಜನೆಯು ಬೆನ್ನೆಲುಬಾಗಿ ನಿಂತಿದೆ ಎಂದರು.
ದೂರದೃಷ್ಟಿಯನ್ನಿಟ್ಟುಕೊಂಡು ಪೂಜ್ಯ ವೀರೇಂದ್ರ ಹೆಗ್ಗಡೆಯವರು ಹಲವಾರು ಯೋಜನೆಗಳನ್ನು ರೂಪಿಸಿದ್ದಾರೆ ಅವರ ಜೊತೆ ಅವರ ಧರ್ಮಪತ್ನಿ ಹೇಮಾವತಿ ಅಮ್ಮನವರ ಸಹಕಾರವು ತುಂಬಾ ಮುಖ್ಯವಾಗಿದೆ ಹೀಗಾಗಿ ಅಮ್ಮನವರ ಜನ್ಮದಿನದ ಪ್ರಯುಕ್ತ ತಾಲೂಕಿನ 48ಕ್ಕೂ ಅಧಿಕ ಸದಸ್ಯರುಗಳ ಮನೆ ಮನೆಗಳಿಗೆ ತೆರಳಿ ಹಣ್ಣು ಹಂಪಲ ವಿತರಿಸಲಾಯಿತು, ಜ್ಞಾನ ವಿಕಾಸ ಯೋಜನಾಧಿಕಾರಿ ಶೋಭಾ ಹೆಚ್ ಸೇರಿದಂತೆ ತಾಲೂಕಿನ ಆಯಾ ವಲಯಗಳಲ್ಲಿ ಜ್ಞಾನ ವಿಕಾಸ ಯೋಜನಾಧಿಕಾರಿಗಳು ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಸೇರಿದಂತೆ ಗ್ರಾಮದ ಗಣ್ಯರು ಹಾಗೂ ಸಂಘದ ಸದಸ್ಯರುಗಳು ಮತ್ತಿತರರು ಇದ್ದರು. ಚಿತ್ರ:- ಹೇಮಾವತಿ ಅಮ್ಮನವರ ಜನ್ಮದಿನದ ಪ್ರಯುಕ್ತ ಹಣ್ಣು ಹಂಪಲ ವಿತರಿಸಿದ ಯೋಜನಾಧಿಕಾರಿ ಮಂಜುನಾಥಗೌಡ ಎಂಸೇವಾಪ್ರತಿನಿಧಿಗಳು ಹಾಗೂ ಗಣ್ಯರು ಮತ್ತಿತರರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 