ಹೇಮಾವತಿ ಹೆಗ್ಗೆಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಹಣ್ಣು ಹಂಪಲು ವಿತರಣೆ
Fruit and vegetable distribution on the occasion of Hemavati Heggede's birthday
ಪಾಶ್ಚಾಪೂರ 06 : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಹಾಗೂ ಧರ್ಮಸ್ಥಳದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಹೇಮಾವತಿ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಪಾಶ್ಚಾಪೂರ ಗ್ರಾಮದಲ್ಲಿ ಧರ್ಮಸ್ಥಳದಿಂದ ಪ್ರತಿ ತಿಂಗಳು ಮಾಸಾಶನ ಪಡೆಯುತ್ತಿರುವ ನಿರ್ಗತಿಕ ವಾತ್ಸಲ್ಯ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಹಣ್ಣು ಹಂಪಲು ವಿತರಣೆ ಮಾಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಶ್ರೀಕಾಂತ ನಾಯ್ಕ್ ಮಾತನಾಡಿ, ಹುಕ್ಕೇರಿ ಹಾಗೂ ಸಂಕೇಶ್ವರ ವ್ಯಾಪ್ತಿಯ ಗ್ರಾಮಗಳಲ್ಲಿ ನಿರ್ಗತಿಕ ವಾತ್ಸಲ್ಯ ಕುಟುಂಬಗಳಿಗೆ ಧರ್ಮಸ್ಥಳದ ಧರ್ಮಾಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರತಿ ತಿಂಗಳು ಅವರ ಜೀವನ ನಿರ್ವಹಣೆ ಹಾಗೂ ಅನಾರೋಗ್ಯದ ಸಂದರ್ಭದಲ್ಲಿ ಅನುಕೂಲವಾಗಲು ಮಾಸಾಶನ ಹಾಗೂ ವರ್ಷಕ್ಕೊಮ್ಮೆ ಮನೆ ಬಳಕೆಗೆ ಪಾತ್ರೆ ಪರಿಕರಗಳು,
ಉಡುಗೆ ಹಾಗೂ ಹಾಸಿಗೆಗಳನ್ನು ನೀಡುವುದರ ಜೊತೆಗೆ, ತಾಲೂಕಿನ 3 ಗ್ರಾಮಗಳಲ್ಲಿರುವ ಮೂರು ಜನ ನಿರ್ಗತಿಕ ವಾತ್ಸಲ್ಯ ಫಲಾನುಭವಿಗಳಿಗೆ ವಾಸಿಸಲು ಸೂರು ಇಲ್ಲದ್ದರಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮದ ಅಡಿಯಲ್ಲಿ 3 ಹೊಸ ಮನೆ ನಿರ್ಮಾಣ ಮಾಡಿ ಕೊಡಲಾಗಿದ್ದು, ಹಾಗೂ ಧರ್ಮಸ್ಥಳದ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಮಹಿಳೆಯರು ಸ್ವಾವಲಂಬಗೆ ಜೀವನ ನಡೆಸಲು ಅನುಕೂಲವಾಗುವಂತೆ ತಾಲೂಕಿನ ಆಯ್ದ ಗ್ರಾಮಗಳಲ್ಲಿ ಹೊಲಿಗೆ ತರಬೇತಿಯಂತಹ ಕೌಶಲ್ಯ ಆಧಾರಿತ ತರಬೇತಿಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪಾಶ್ಚಾಪೂರ ವಿಭಾಗದ ಮೇಲ್ವಿಚಾರಕ ಚಂದ್ರಶೇಖರ ಹಲಸಗಿ, ಹುಕ್ಕೇರಿ ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಸರಿತಾ ವಿನಾಯಕ, ಗೌರವ್ವ ಕುಡಜೋಗಿ, ಅಕ್ಷತಾ ಸುಲಧಾಳ, ಚಂದ್ರಕಲಾ ಹಿರೇಮಠ, ಲಲಿತಾ ಚಂದ್ರ್ಪಗೋಳ, ಬಸವ್ವ ಬೆಳವಿ ವಿದ್ಯಾಶ್ರೀ ಮುನ್ನೋಳಿ, ಸುನಿತಾ ಹಿರೇಮಠ, ಮುತ್ತಪ್ಪ ಕೀಳ್ಳಿಕೇತ್ರ, ಶೋಭಾ ಜಿಡ್ಡಿ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 