ಮಾಜಿ ಸಚಿವ ಎ.ಬಿ. ಪಾಟೀಲ ಹುಟ್ಟುಹಬ್ಬದ ನಿಮಿತ್ಯ ಹಣ್ಣು ಹಂಪಲ ವಿತರಣೆ
Fruit and vegetable distribution on the occasion of the birthday of former minister A.B. Patil
ಯಮಕನಮರಡಿ, 12 ; ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಮಿನ ವಿಶೇಷ ಬುದ್ಧಿಮಾಂದ್ಯ ವಿಕಲಚೇತನ ಶಾಲೆಯಲ್ಲಿ ಮಾಜಿ ಸಚಿವರಾದ ಎ.ಬಿ.ಪಾಟೀಲ ಇವರ 73ನೇ ಜನ್ಮ ದಿನಾಚರಣೆಯ ಅಂಗವಾಗಿ ಹಿಡಕಲ್ ಡ್ಯಾಮಿನ ಗೆಳೆಯರ ಬಳಗ ಹಾಗೂ ಎಬಿ ಪಾಟೀಲ್ ಅಭಿಮಾನಿ ಬಳಗದ ವತಿಯಿಂದ ಸಿಹಿ ವಿತರಣೆ ಹಾಗೂ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮದಲ್ಲಿ ಯುವಧುರೀಣರು ಹಾಗೂ ಸಮಾಜ ಸೇವಕರಾದ ರಾಜು ಗಲಾಟೆ, ಪ್ರಮೋದ ಚೌಗಲಾ, ರಾಜು ಮುಲ್ತಾನಿ, ಮಹೇಶ ಹಂಜಿ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾರುತಿ ಹೊಸಮನಿ, ಗ್ರಾಮ ಪಂಚಾಯಿತಿ ಸದಸ್ಯರಾದ ಸುರೇಶ ಪವಾರ, ಸದಾನಂದ ಮಾಳ್ಯಾಗೋಳ, ಶಿವಲಿಂಗ ನೇಸರ್ಗಿ, ಮಹೇಶ ಹಂಜಿ, ಶಾಮಲಾ ಹೊಸಮನಿ, ಗುರುಸಿದ್ಧ ಮೂಡಲಗಿ, ಅಲ್ಬರ್ಟ್ ಬ್ರುಟ್ಟೋ, ರಮೇಶ ಹುರುಳಿ, ನಿಸಾರ್ ಶೇಖ್, ಸಂಜು ಕಿಣಗಿ, ಅರ್ಜುನ ನೇಸರಗಿ, ದೀಪಾ ಪತ್ತಾರ, ಎ.ಎಮ್.ಇನಾಂದಾರ, ಹಿಡಕಲ್ ಡ್ಯಾಮ್, ಹೊಸಪೇಟೆ, ಹಟ್ಟಿ ಆಲೂರ ಮುಂತಾದ ಗ್ರಾಮಗಳ ಕಾರ್ಯಕರ್ತರು, ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನ ಮಕ್ಕಳ ಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಹಿಡಕಲ್ ಡ್ಯಾಮಿನ ಬಸವೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಅರ್ಥಶಾಸ್ತ್ರ ಉಪನ್ಯಾಸಕ ಎ.ವೈ.ಸೋನ್ಯಾಗೋಳ ಕಾರ್ಯಕ್ರಮ ನಿರೂಪಿಸಿದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 