ಪೋಲಿಸ್ ಮತ್ತು ಸಾರ್ವಜನಿಕರ ನಡುವೆ ವಿಶ್ವಾಸ ಮೂಡಿಸಲು ಆತ್ಮ ಸ್ಥೈರ್ಯ ತುಂಬಿ: ಪಿ.ಎಸ್.ಐ
Full of self-confidence to build trust between police and public
ಲೋಕದರ್ಶನ ವರದಿ
ದಾಂಡೇಲಿ ಫೇ 17 : ದಾಂಡೇಲಿಯ ಬಾಂಗೂರ ನಗರದ ವೆಸ್ಟಕೋಸ್ಟ ಪೇಪರಮಿಲ್ ಆವರಣದಲ್ಲಿರುವ ಶಾಪಿಂಗ್ ಕಾಂಪ್ಲೇಕ್ಸ್ನ ಹೊರಾವರಣದಲ್ಲಿ ಸ್ಥಳೀಯ ನಗರ ಪೋಲಿಸ್ ಠಾಣೆಯಿಂದ ಕಾರ್ಮಿಕರಿಗಾಗಿ ಜನಸಂಪರ್ಕ ಸಭೆಯನ್ನು ಎರಿ್ಡಸಲಾಗಿತ್ತು.
ಸಭೆಯಲ್ಲಿ ಮಾತನಾಡಿದ ನಗರಠಾಣೆಯ ಪಿ.ಎಸ್.ಐ ಅಮೀನ ಅತ್ತಾರ ಅವರು, ಪೋಲಿಸರು ಮತ್ತು ಸಾರ್ವಜನಿಕರ ನಡುವೆ ವಿಶ್ವಾಸ ಮೂಡಿಸುವ ಉದ್ದೇಶದಿಂದ ಮನೆ ಮನೆಗೆ ಪೋಲಿಸ್ ವಿಶೇಷ ಕಾರ್ಯಕ್ರಮದಡಿ ಪ್ರತಿ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಜನರಲ್ಲಿ ಆತ್ಮ ಸ್ಥೈರ್ಯ ತುಂಬುವ ಕೆಲಸ ಮಾಡಲಾಗಿದೆ. ಸಂಚಾರಿ ನಿಯಮಗಳ ಅರಿವು, ಸುರಕ್ಷಿತ ಚಾಲನೆ, ಸೈಬರ್ ಅಪರಾಧ ತಡ,ೆ ಕಾರ್ಮಿಕರ ಸುರಕ್ಷತೆ, ದೂರುಗಳಿಗೆ ತ್ವರಿತ ಸ್ಪಂದನೆ, ತನಿಖೆಯ ಮಾಹಿತಿ ಪೂರೈಕೆ ಮುಂತಾದ ಅಂಶಗಳ ಬಗ್ಗೆ ಜನರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು. ಸಿಪಿಐ ಶಿವಾನಂದ ಅಂಬಿಗೇರ ಅವರು ನ್ಯಾಯಾಲಯದಲ್ಲಿರುವ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆಯಾಗಲು ಸಾಕ್ಷ್ಯಗಳ ಕೊರತೆಯೇ ಪ್ರಮುಖ ಕಾರಣವಾಗಿದೆ. ಸಾಕ್ಷಿದಾರರು ನ್ಯಾಯಾಲಯದಲ್ಲಿ ಹಿಂದೇಟು ಹಾಕುವದರಿಂದ ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಇದನ್ನು ತಡೆಯಲು ಕೇಂದ್ರ ಸರ್ಕಾರ ಡಿಜಿಟಲಿಕರಣದ ಮೂಲಕ ಸಾಕ್ಷ್ಯಗಳ ಚಿತ್ರೀಕರಣ ಸೇರಿದಂತೆ ಕಾನೂನು ತಿದ್ದುಪಡಿ ತಂದಿದ್ದು, ಅಪರಾಧಿಗಳಿಗೆ ಶಿಕ್ಷೆ ಖಚಿತಪಡಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಗದ ಕಾರ್ಖಾನೆಯ ಕಾರ್ಮಿಕರು ಭಾಗವಹಿಸಿ ಕಾನೂನು ವಿಚಾರಗಳ ಕುರಿತು ಸಂವಾದ ನಡೆಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 