2ಎ ಮೀಸಲಾತಿ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಮಾಜಿ ಶಾಸಕ ನಡಹಳ್ಳಿ
Full support for 2A reservation struggle: Former MLA Nadahalli
ತಾಳಿಕೋಟಿ 10: 2 ಎ ಮೀಸಲಾತಿಗೆ ಆಗ್ರಹಿಸಿ ಜಗದ್ಗುರುಗಳಾದ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಸುವರ್ಣ ಸೌವುದಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲು ನಿರ್ಣಯಿಸಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ ಇರಲಿದೆ ಎಂದು ಮಾಜಿ ಶಾಸಕ ನಡಹಳ್ಳಿ ಹೇಳಿದರು.
ಸೋಮವಾರ ಪಟ್ಟಣದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಪಂಚಮಸಾಲಿ ಸಮಾಜದ ಬಡ ಮಕ್ಕಳ ಶಿಕ್ಷಣ ಹಾಗೂ ಉದ್ಯೋಗಕ್ಕೆ ಅನುಕೂಲವಾಗಲೆಂದು 2 ಎ ಮೀಸಲಾತಿಗಾಗಿ ಕಳೆದ 7-8 ವರ್ಷಗಳಿಂದ ಹೋರಾಟವನ್ನು ಮಾಡುತ್ತಾ ಬಂದಿದ್ದಾರೆ, ಇದು ನ್ಯಾಯೋಜಿತವಾದ ಬೇಡಿಕೆಯಾಗಿದೆ ಇದರಲ್ಲಿ ರಾಜಕಾರಣ ಬೇಡ, ನಮ್ಮ ಸರ್ಕಾರ ಇದ್ದಾಗ ನಾವು 2 ಡಿ. ಮೀಸಲಾತಿ ಪ್ರಕಟಿಸಿದ್ದೇವು ಆದರೆ ರಾಜ್ಯದಲ್ಲಿರುವ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಗಳನ್ನು ಗುರುಗಳು ಭೇಟಿಯಾಗಿ ವಿನಂತಿಸಿಕೊಂಡರೂ ಯಾವುದೇ ರೀತಿಯ ಸ್ಪಂದನೆ ಮಾಡುತ್ತಿಲ್ಲ, ಜೊತೆಗೆ ಯು ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಅಧಿಕಾರಿಗಳಿಂದ ಮಾಡಿಸಲಾಗುತ್ತಿದೆ ನಾನು ಈ ಕೆಟ್ಟ ಧೋರಣೆಯನ್ನು ಖಂಡಿಸುತ್ತೇನೆ ಎಂದ ಅವರು ನಾನು ಹೋರಾಟದಲ್ಲಿ ಸಂಪೂರ್ಣವಾಗಿ ಭಾಗಿಯಾಗುತ್ತಿದ್ದೆ ನನ್ನ ಆರೋಗ್ಯದ ಸಮಸ್ಯೆ ಇರುವುದರಿಂದ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಆದರೂ ನಾನು ನೈತಿಕವಾಗಿ ಅವರ ಬೆಂಬಲಕ್ಕೆ ನಿಂತಿದ್ದೇನೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪಂಚಮಸಾಲಿ ಸಮಾಜದ ಮುಖಂಡರಾದ ಮಡು ಸಾಹುಕಾರ ಬಿರಾದಾರ, ಕಾಶಿನಾಥ ಮುರಾಳ, ಶಿವಶಂಕರ ಹಿರೇಮಠ, ಪ್ರಭು ಬಿಳೇಭಾವಿ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಸನಗೌಡ ಮಾಡಗಿ, ನಿಂಗಣ್ಣ ಕುಂಟೋಜಿ, ಮಹಾಂತೇಶ ಮುರಾಳ, ದ್ಯಾಮನಗೌಡ ಪಾಟೀಲ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 