ಮಾಧ್ಯಮ ವೃತ್ತಿಯಲ್ಲಿಯ ಮೋಜಿನ ಪ್ರಸಂಗಗಳು ವಿನೋದ ಕಾರ್ಯಕ್ರಮ
Fun program about funny incidents in the media profession
ಬೆಳಗಾವಿ 10- ಹಾಸ್ಯಕೂಟ ಬೆಳಗಾವಿ ಮತ್ತು ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಇದೇ ದಿ. 13 ಶನಿವಾರದಂದು ಸಾಯಂಕಾಲ 4-30 ಕ್ಕೆ ನಗರದ ಚೆನ್ನಮ್ನ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ "ಮಾಧ್ಯಮ ವೃತ್ತಿಯಲ್ಲಿಯ ಮೋಜಿನ ಪ್ರಸಂಗಗಳು" ಎಂಬ ಹಾಸ್ಯ ಕಾರ್ಯಕ್ರಮವನ್ನು ಹಮ್ನಿಕೊಂಡಿದ್ದಾರೆ.
ಹಿರಿಯ ಪತ್ರಕರ್ತರಾದ ಎಲ್. ಎಸ್. ಶಾಸ್ತ್ರಿಯವರು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಿದ್ದು ಅಧ್ಯಕ್ಷತೆಯನ್ನು ಹಿರಿಯ ಕವಿಗಳಾದ ಪ್ರೊ. ಎಂ. ಎಸ್. ಇಂಚಲ ವಹಿಸಿಕೊಂಡಿದ್ದಾರೆ. ಪ್ರಾಯೋಜಕತ್ವವನ್ನು ಹಿರಿಯ ಪತ್ರಿಕಾ ವರದಿಗಾರರಾದ ಶ್ರೀಮತಿ ಕೀರ್ತಿಶೇಖರ ಕಾಸರಗೋಡು ಅವರು ವಹಿಸಿಕೊಂಡಿದ್ದು ವಪ್ರಾಸ್ತಾವಿಕ ನುಡಿಯನ್ನು ಹಾಸ್ಯಕೂಟ ಸಂಚಾಲಕ, ವರದಿಗಾರ ಗುಂಡೇನಟ್ಟಿ ಮಧುಕರ ಆಡಲಿದ್ದಾರೆ.
ಮಾಧ್ಯಮದಲ್ಲಿಯ. ಮಜಾ ಪ್ರಸಂಗಗಳನ್ನು ಹಿರಿಯ ವರದಿಗಾರರಾದ ಸುಭಾಸ ಕುಲಕರ್ಣಿ, ಮುರುಗೇಶ ಶಿವಪೂಜಿ, ಹೃಷಿಕೇಶ ಬಹಾದ್ಧೂರ ದೇಸಾಯಿ, ರವೀಂದ್ರ ಉಪ್ಪಾರ, ಮೆಹಬೂಬ ಮಕಾನದಾರ ಹಂಚಿಕೊಳ್ಳಲ್ಲಿದ್ದಾರೆ. ಹಾಸ್ಯಕೂಟ ಕಲಾವಿದ ಜಿ. ಎಸ್. ಸೋನಾರ ನಿರೂಪಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಹಾಸ್ಯಾಸಕ್ತರು ಆಗಮಿಸುವಂತೆ ಸಾಹಿತ್ಯ ಭವನದ ಗೌರವ ಕಾರ್ಯದರ್ಶಿ ರಾಮಚಂದ್ರ ಕಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 