ಹಳ್ಳಿ ಹಳ್ಳಿಗೆ ಭೇಟಿ ನೀಡುತ್ತಿರುವ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಕಾರವಾರ,೧೬: ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಮೊಹಮ್ಮದ್ ರೋಶನ್ ಅವರು ಜಿಲ್ಲೆಯ ಎಲ್ಲಾ ತಾಲೂಕುಗಳ ಹಳ್ಳಿಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಅಭಾವ ಮತ್ತು ಜಿ.ಪಂ. , ಜಿಲ್ಲಾಡಳಿತ ನೀಡುತ್ತಿರುವ ನೀರಿನ ಸೌಲಭ್ಯವನ್ನು ಪರಿಶೀಲಿಸುತ್ತಿದ್ದಾರೆ. ಅವಶ್ಯವಿದ್ದಡೆ ಬೋರ್ ವೆಲ್ ಸಹ ಹಾಕಲಾಗುತ್ತಿದೆ. ಗುರುವಾರ ಅವರು ಹಳಿಯಾಳ ತಾಲೂಕಿನ ಹತ್ತಾರು ಹಳ್ಳಿಗಳಿಗೆ ಅಧಿಕಾರಿಗಳ ತಂಡದ ಜೊತೆ ಭೇಟಿ ನೀಡಿ, ಜನರ ಜೊತೆ ನೇರವಾಗಿ ಮಾತುಕತೆ ನಡೆಸಿದರು. ಹಳಿಯಾಳದ ಮುರ್ಕವಾಡ, ಭಗವತಿ, ಕೆ.ಕೆ.ಹಳ್ಳಿ ಗಳಿಗೆ ಭೇಟಿ ನೀಡಿ ಜನರ ಜೊತೆ ಮಾತನಾಡಿದರು. ಬಿ.ಕೆ.ಹಳ್ಳಿಗೆ ಸಹ ಭೇಟಿ ನೀಡಿದರು. ಟಾಸ್ಕಪೋರ್ಸ ನಡಿ ಕೈಗೊಂಡ ಕಾಮಗಾರಿ ಅಥವಾ ಪಯರ್ಾಯ ನೀರಿನ ವ್ಯವಸ್ಥೆಯ ಬಿಲ್ ಗಳನ್ನು ತಕ್ಷಣ ಜಿಲ್ಲಾ ಪಂಚಾಯತ್ ಕಚೇರಿಗೆ ಕಳುಹಿಸಲು ಸೂಚಿಸಿದರು. ಜನರಿಗೆ ಕುಡಿಯುವ ನೀರನ್ನು ತೊಂದರೆಯಾಗದಂತೆ, ನಿಯತವಾಗಿ ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಾ.ಪಂ. ಕಾರ್ಯನಿವರ್ಾಹಕ ಅಧಿಕಾರಿ ಮಹೇಶ್ ಕುರಿಯವರ, ಎ.ಸಿ.ಹಳೆಮನಿ, ಸಹಾಯಕ ಎಂಜಿನಿಯರ್ಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 