ಯುಪಿಯಲ್ಲಿ ಎಂಬಿಎ ವಿದ್ಯಾರ್ಥಿ ಮೇಲೆ ಸಾಮೂಹಿಕ ಅತ್ಯಾಚಾರ
ಬುಲಂದ್ಶಹರ್, ಫೆಬ್ರವರಿ 15, ನಿರ್ಭಯ ಪ್ರಕರಣ ನೆನಪು ಮಾಡುವಂತಹ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಜಿಲ್ಲೆಯ ಸಿಯಾನಾ ಪ್ರದೇಶದಲ್ಲಿ ಜರುಗಿದೆ. ಮೀರತ್ ವಿಶ್ವವಿದ್ಯಾಲಯದ ಎಂಬಿಎ ವಿದ್ಯಾರ್ಥಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.ಗುರುವಾರ ಘಟನೆ ಸಂಭವಿಸಿದ್ದು, ಮೀರತ್ನಿಂದ ವಿದ್ಯಾರ್ಥಿ ಬಸ್ನಲ್ಲಿ ಹಿಂದಿರುಗುತ್ತಿದ್ದಾಗ, ವಾಹನವು ಕೆಟ್ಟು ನಿಂತಾಗ ಆಕೆ ಕಾರಿನಲ್ಲಿ ಲಿಫ್ಟ್ ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿದ್ದವರು ಬುಲಂದ್ಶಹರ್ನ ಸಿಯಾನಾಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಪ್ರತಿಭಟನೆಗೆ ಪ್ರಯತ್ನಿಸಿದಾಗ ಆಕೆಯ ಮೇಲೆ ಕಬ್ಬಿಣದ ರಾಡಿನಿಂದ ಥಳಿಸಲಾಗಿದೆ. ನಂತರ ವಿದ್ಯಾರ್ಥಿಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಸಯಾನಾ ಪ್ರದೇಶದ ಹಳ್ಳಿಯೊಂದರಲ್ಲಿ ಬಿಸಾಡಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಮೀರತ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದೂ ವರದಿಯಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಆಕೆಯನನ್ನು ಚೆನ್ನಾಗಿ ಬಲ್ಲವರೆ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ, ಇದರಿಂದಾಗಿ ಅವರು ಕಾರಿನಲ್ಲಿ ಲಿಫ್ಟ್ ತೆಗೆದುಕೊಂಡರು.ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಮತ್ತು ಅಪರಾಧಿಗಳನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಮೀರತ್) ಪ್ರವೀಣ್ ಕುಮಾರ್ ತಿಳಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 