ಕಲಿಕಾ ಪ್ರವಾಸಕ್ಕೆ ಜಿ.ಪಂ ಸಿಇಓ ಮಾನಕರ ಚಾಲನೆ
ಲೋಕದರ್ಶನ ವರದಿ
ಬಾಗಲಕೋಟೆ, 12: ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿ ಹಮ್ಮಿಕೊಂಡ ಕಲಿಕಾ ಪ್ರವಾಸಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳಾದ ಗಂಗೂಬಾಯಿ ಮಾನಕರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಇತ್ತೀಚೆಗೆ ಚಾಲನೆ ನೀಡಿ ಮಾತನಾಡಿದ ಅವರು ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮದಡಿ ಈಗಾಗಲೇ ಬಯಲು ಬಹಿದರ್ೆಸೆ ಮುಕ್ತ ಜಿಲ್ಲೆ ಎಂದು ಘೋಷಿಸಲಾಗಿದ್ದು, ಪ್ರಸ್ತುತ ಎರಡನೇ ಹಂತವಾಗಿ ಓಡಿಎಫ್ ಪ್ಲಸ್ ಕಾರ್ಯಕ್ರಮ ಚಟುವಟಿಕೆಯಡಿ ಸ್ವಚ್ಛ ಸುಂದರ ಜಿಲ್ಲೆಯನ್ನಾಗಿಸಲು ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಹಾಗೂ ಶೌಚಾಲಯ ಸುಸ್ಥಿರ ಬಳಕೆ ಪೂರಕವಾಗಿ ಗ್ರಾಮ ಪಂಚಾಯತಿ ಪ್ರತಿನಿಧಿಗಳು, ಅಭಿವೃದ್ದಿ ಅಧಿಕಾರಿಗಳು, ತಾಲೂಕ ಮಟ್ಟದ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿ ಒಟ್ಟು 50 ಜನರಿಗೆ ಒಂದು ದಿನದ ಉಡುಪಿ ಜಿಲ್ಲಾ ಕಲಿಕಾ ಪ್ರವಾಸ ಹಮ್ಮಿಕೊಳ್ಳಲಾಗಿದೆ ಎಂದರು.
ಈಗಾಗಲೇ ಉತ್ತಮ ರೀತಿಯಲ್ಲಿ ಶೌಚಾಲಯಗಳ ಸುಸ್ಥಿರ ಬಳಕೆ ಹಾಗೂ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಮಾಡಿದ ಉಡುಪಿ ಜಿಲ್ಲೆ ಅಧ್ಯಯನ ಪ್ರವಾಸವು ಈ ಜಿಲ್ಲೆಯಲ್ಲಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನ ಕೈಗೊಳ್ಳಲು ಹಾಗೂ ಸ್ವಚ್ಛ ಸುಂದರ ಜಿಲ್ಲೆಯನ್ನಾಗಿಸಲು ಸಹಕಾರವಾಗುವುದೆಂದು ಜಿ.ಪಂ ಸಿಇಓ ಮಾನಕರ ಹೇಳಿದರು. ಇದೇ ಸಂದರ್ಭದಲ್ಲಿ ಜಿ.ಪಂ ಯೋಜನಾ ನಿದರ್ೇಶಕ ವಿ.ಎಸ್.ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 