ಜಿ.ಟಿ.ದೇವೇಗೌಡ ಬೆಂಬಲ ಕೇಳುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ
ಮೈಸೂರು, ನ.22 : ಚುನಾವಣೆ ಎಂದ ಮೇಲೆ ತಂತ್ರ- ಪ್ರತಿತಂತ್ರಗಳು ರೂಪಿಸಲು ಒಬ್ಬರು ಇನ್ನೊಬ್ಬರ ಬೆಂಬಲ ಕೇಳುವುದು ಸಹಜ. ಹೀಗಾಗಿ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ, ಹುಣಸೂರು ಚುನಾವಣೆಗೆ ಶಾಸಕ ಜಿ.ಟಿ.ದೇವೇಗೌಡ ಬೆಂಬಲ ಕೇಳಿರಬಹುದು. ಆದರೆ ತಾವು ಜಿ.ಟಿ.ದೇವೆಗೌಡರ ಜೊತೆ ಮಾತನಾಡುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಇಲ್ಲಿನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಣಸೂರಿನಲ್ಲಿ ನಮ್ಮ ಪಕ್ಷದ ಅಭ್ಯಥರ್ಿ ಕಣಕ್ಕಿಳಿಸಿದ್ದಾರೆ ಎಂದು ಭಾವಿಸಿ ಜಿ.ಟಿ.ದೇವೇಗೌಡರು ಜೆಡಿಎಸ್ ಗೆ ಬೆಂಬಲ ಕೊಟ್ಟರೆ ಸ್ವಾಗತ. ತಾವಾಗಿಯೇ ಬೆಂಬಲ ಕೇಳುವುದಿಲ್ಲ. ಬಿಜೆಪಿ ಒತ್ತಡ ತಂತ್ರ ಅನುಸರಿಸಿ ಚುನಾವಣೆ ಗೆಲ್ಲಲು ಹೊರಟಿದೆ ಎಂದು ದೂರಿದರು.
ಹಿರೆಕೆರೂರು ಜೆಡಿಎಸ್ ಅಭ್ಯಥರ್ಿ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿಯವರನ್ನು ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಮಾಡಲು ಯಡಿಯೂರಪ್ಪ ಪುತ್ರ ಸಭೆ ನಡೆಸಿದ್ದಾರೆ. ಅದೇ ರೀತಿ ರಂಭಾಪುರಿ ಸ್ವಾಮೀಜಿಯು ನಮ್ಮ ಅಭ್ಯಥರ್ಿಯನ್ನು ಹಿಂದೆ ಸರಿಯುವಂತೆ ಮಾಡಲು ಮನವೊಲಿಸುತ್ತಿದ್ದಾರೆ. ಇಷ್ಟು ಒತ್ತಡಗಳನ್ನು ಹೇರಿ ಚುನಾವಣೆ ಗೆಲ್ಲುವ ಅಗತ್ಯ ಇದೆಯಾ ? ಎಂದು ಅವರು ಪ್ರಶ್ನಿಸಿದರು.
ಸ್ವಾಮೀಜಿಗೆ ಕರೆದು ಟಿಕೆಟ್ ಕೊಟ್ಟಿರಲಿಲ್ಲ. ಅವರೆ ನಿಮ್ಮ ಪಕ್ಷದಿಂದ ಟಿಕೆಟ್ ಕೊಡಿ ಎಂದು ಬಂದಿದ್ದರು, ಅದೇ ರೀತಿ ಅವರ ಅಭಿಮಾನಿಗಳು ಒತ್ತಡ ಹಾಕಿದ್ದರು ಎಂದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 