ಅಪರಾಧಿಗಳಿಗೆ ಗಲ್ಲು : ನಿರ್ಭಯಾ ಪೂರವಿಕರ ಗ್ರಾಮದಲ್ಲಿ ಸಂಭ್ರಮಾಚರಣೆ
ಬಲ್ಲಿಯಾ, ಮಾ 20,ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಇಂದು ಬೆಳಗ್ಗೆ ತಿಹಾರ್ ಜೈಲಿನಲ್ಲಿ ಗಲ್ಲು ಶಿಕ್ಷೆ ಜಾರಿಯಾದ ಬೆನ್ನಲ್ಲೇ ನಿರ್ಭಯಾ ಪೂರ್ವಿಕರ ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿತ್ತು.ಉತ್ತರ ಪ್ರದೇಶದ ಮರ್ವಾರಾ ಕಾಲಾ ಗ್ರಾಮಸ್ಥರು ಪರಸ್ಪರ ಸಿಹಿ ಹಂಚಿ, ಹೋಳಿ ಆಚರಿಸಿದರು. “ಮುಸುಕಿದ್ದ ಕತ್ತಲೆ ಇಂದು ಬೆಳಗಿನ ಜಾವ ಸರಿದಿದೆ. ಈ ವರ್ಷ ಗ್ರಾಮದಲ್ಲಿ ಯಾರೂ ಸಹ ಹೋಳಿ ಆಚರಿಸಿರಲಿಲ್ಲ. ಆದರೆ ಈಗ ಎಲ್ಲರೂ ಬಣ್ಣದಲ್ಲಿ ಮೀಯುತ್ತಿದ್ದಾರೆ” ಎಂದು ನಿರ್ಭಯಾಳ ಅಜ್ಜ ಲಾಲ್ ಜಿ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ. "ಕಾಮುಕರನ್ನು ಗಲ್ಲಿಗೇರಿಸಿದ ಕ್ರಮ ಪ್ರತಿಯೊಬ್ಬ ಹೆಣ್ಣಿಗೆ ಸಂದ ಅಭಿನಂದನೆಯಾಗಿದೆ. ದೇಶದ ಮಹಿಳೆಯರು ನನ್ನ ಮೊಮ್ಮಗಳೊಂದಿಗೆ ತಮ್ಮನ್ನು ಗುರುತಿಸಿಕೊಂಡಿದ್ದು, ಹಲವು ವರ್ಷಗಳಬಳಿಕವಾದರೂ ನ್ಯಾಯ ದೊರಕಿದೆ" ಎಂದು ಲಾಲ್ ಜಿ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 