ಅಪರಾಧಿಗಳಿಗೆ ಗಲ್ಲು : ನಿರ್ಭಯಾ ಪೂರವಿಕರ ಗ್ರಾಮದಲ್ಲಿ ಸಂಭ್ರಮಾಚರಣೆ
ಬಲ್ಲಿಯಾ, ಮಾ 20,ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಇಂದು ಬೆಳಗ್ಗೆ ತಿಹಾರ್ ಜೈಲಿನಲ್ಲಿ ಗಲ್ಲು ಶಿಕ್ಷೆ ಜಾರಿಯಾದ ಬೆನ್ನಲ್ಲೇ ನಿರ್ಭಯಾ ಪೂರ್ವಿಕರ ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿತ್ತು.ಉತ್ತರ ಪ್ರದೇಶದ ಮರ್ವಾರಾ ಕಾಲಾ ಗ್ರಾಮಸ್ಥರು ಪರಸ್ಪರ ಸಿಹಿ ಹಂಚಿ, ಹೋಳಿ ಆಚರಿಸಿದರು. “ಮುಸುಕಿದ್ದ ಕತ್ತಲೆ ಇಂದು ಬೆಳಗಿನ ಜಾವ ಸರಿದಿದೆ. ಈ ವರ್ಷ ಗ್ರಾಮದಲ್ಲಿ ಯಾರೂ ಸಹ ಹೋಳಿ ಆಚರಿಸಿರಲಿಲ್ಲ. ಆದರೆ ಈಗ ಎಲ್ಲರೂ ಬಣ್ಣದಲ್ಲಿ ಮೀಯುತ್ತಿದ್ದಾರೆ” ಎಂದು ನಿರ್ಭಯಾಳ ಅಜ್ಜ ಲಾಲ್ ಜಿ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ. "ಕಾಮುಕರನ್ನು ಗಲ್ಲಿಗೇರಿಸಿದ ಕ್ರಮ ಪ್ರತಿಯೊಬ್ಬ ಹೆಣ್ಣಿಗೆ ಸಂದ ಅಭಿನಂದನೆಯಾಗಿದೆ. ದೇಶದ ಮಹಿಳೆಯರು ನನ್ನ ಮೊಮ್ಮಗಳೊಂದಿಗೆ ತಮ್ಮನ್ನು ಗುರುತಿಸಿಕೊಂಡಿದ್ದು, ಹಲವು ವರ್ಷಗಳಬಳಿಕವಾದರೂ ನ್ಯಾಯ ದೊರಕಿದೆ" ಎಂದು ಲಾಲ್ ಜಿ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 