ವಿವಾದಗಳ ನಡುವೆಯೇ ಡಿಡಿಸಿಎ ಸಮಿತಿಗೆ ಗಂಭೀರ್, ಸೆಹ್ವಾಗ್ ಸೇರ್ಪಡೆ
ನವದೆಹಲಿ 25: ವಿರೋಧ ಮತ್ತು ವಿವಾದಗಳ ನಡುವೆಯೇ ದೆಹಲಿ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಸಮಿತಿಯಲ್ಲಿ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಮತ್ತು ಗೌತಮ್ ಗಂಭೀರ್ ಆಯ್ಕೆಯಾಗಿರುವುದು ಹಲವರ ಹುಬ್ಬೇರಿಸಿದೆ.
ಈಗಾಗಲೇ ಡಿಡಿಸಿಎ ಸಮಿತಿಯಲ್ಲಿ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಮತ್ತು ರಾಹುಲ್ ಸಂಘ್ವಿ ಇದ್ದು, ಇವರೊಂದಿಗೆ ಸೆಹ್ವಾಗ್ ಮತ್ತು ಗೌತಮ್ ಗಂಭೀರ್ ಕೂಡ ಸ್ಥಾನಗಳಿಸಿದ್ದಾರೆ. ದೆಹಲಿ ಕ್ರಿಕೆಟ್ ಸಂಸ್ಥೆಯ ಕೋಚ್ ಗಳ ಆಯ್ಕೆ, ಆಯ್ಕೆದಾರರ ಆಯ್ಕೆ ಮತ್ತು ಕ್ರಿಕೆಟಿಗೆ ಸಂಬಂಧಿಸಿದ ವಿಚಾರಗಳ ಕುರಿತು ನಿರ್ಣಯ ಕೈಗೊಳ್ಳಲು ಈ ಸಮಿತಿಗೆ ಅಧಿಕಾರವಿರುತ್ತದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಡಿಡಿಸಿಎ ಅಧ್ಯಕ್ಷ ರಜತ್ ಶಮರ್ಾ ಅವರು, ಲೋಧಾ ಸಮಿತಿ ಶಿಫಾರಸ್ಸಿನಂತೆಯೇ ಡಿಡಿಸಿಎ ಸಮಿತಿ ರಚನೆ ಮಾಡಲಾಗಿದ ಎಂದು ಹೇಳಿದ್ದಾರೆ. ಇನ್ನು ಸೆಹ್ವಾಗ್ ಮತ್ತು ಗಂಭೀರ್ ಆಯ್ಕೆ ಸಂಬಂಧ ಈಗಾಗಲೇ ಹಲವರು ವಿರೋಧ ವ್ಯಕ್ತಪಡಿಸಿದ್ದರು.
ವರ್ಷದ ಹಿಂದೆ ರಜತ್ ಶಮರ್ಾ ಡಿಡಿಸಿಎ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಸಂದರ್ಭದಲ್ಲೇ ಗಂಭೀರ್ ಗೆ ಡಿಡಿಸಿಎಯನಲ್ಲಿ ಸ್ಥಾನ ಸಿಗಬಹುದು ಎಂದು ಕೆಲವರು ಅಂದಾಜಿಸಿದ್ದರು.
ಇನ್ನು ಸೆಹ್ವಾಗ್ ಈಗಾಗಲೇ ತಮ್ಮದೇ ಆದ ಕ್ರಿಕೆಟ್ ಅಕಾಡೆಮಿಯನ್ನು ಹೊಂದಿದ್ದು, ಅಲ್ಲದೆ ವಾಹಿನಿಯೊಂದರಲ್ಲಿ ಕ್ರಿಕೆಟ್ ತಜ್ಞರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಶೇಷವೆಂದರೆ ಈ ವಾಹಿನಿಯು ದೆಹಲಿ ಕ್ರಿಕೆಟ್ ಸಂಸ್ಥೆಯ ಅದ್ಯಕ್ಷರಾದ ರಜತ್ ಶಮರ್ಾ ಒಡೆತನದ್ದು ಎಂದು ಕೇಳಿಬಂದಿದೆ. ಇನ್ನು ಸಮಿತಿಯ ಇತರೆ ಸದಸ್ಯರಾದ ಗಂಭೀರ್ ಐಪಿಎಲ್ ನಲ್ಲಿ ದೆಹಲಿ ತಂಡವನ್ನು ಪ್ರತಿನಿಥಿಸುತ್ತಿದ್ದಾರೆ.
ಸಂಘ್ವಿ ಐಪಿಎಲ್ ನ ಮುಂಬೈ ತಂಡದ ಫ್ರಾಂಚೈಸಿಗಳಾಗಿದ್ದು, ಆಕಾಶ್ ಚೋಪ್ರಾ ವಿವಿಧ ಚಾನೆಲ್ ಗಳಲ್ಲಿ ಕ್ರಿಕೆಟ್ ವಿಶ್ಲೇಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇದೇ ಕಾರಣಕ್ಕೆ ರಜತ್ ಶಮರ್ಾ ತಮ್ಮ 'ಸ್ವಹಿತಾಸಕ್ತಿ'ಗಾಗಿ ಡಿಡಿಸಿಎಗೆ ತಮಗೆ ಬೇಕಾದವರನ್ನೇ ಆಯ್ಕ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 