ಕಡಣಿ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ

ಕಡಣಿ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ Gandhi Gram Puraskar Award for Kadani Gram Panchayat

ಆಲಮೇಲ 03: ತಾಲೂಕಿನ ಕಡಣಿ ಗ್ರಾಮಕ್ಕೆ 2023 -24ನೇ  ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ತಾಲೂಕಿನ ಕಡಣಿ ಗ್ರಾಮ ಪಂಚಾಯಿತಿ ಆಯ್ಕೆಗೊಂಡಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಬ್ಯಾಂಕ್ವಟ್ ಹಾಲಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರದಿಂದ ನಡೆದ ಪಂಚಾಯಿತಿ ರಾಜ್ಯ ಇಲಾಖೆಯಿಂದ ಕೊಡಲ್ಪಡುವ ಪ್ರಶಸ್ತಿ  ಪ್ರಧಾನ ಸಮಾರಂಭದಲ್ಲಿ ಕಡಣಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸಲಿಂಗಪ್ಪ ಎಸ್ ಕತ್ತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶರಣಗೌಡ ಕಲ್ಲವಾಡ ಅವರಿಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ಯ  ಸಚಿವರಾದ ಪ್ರಿಯಾಂಕ ಖರ್ಗೆ ಅವರು ಪ್ರಶಸ್ತಿ ಹಾಗೂ ವಿಶೇಷ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು.