ದೂಧಗಂಗಾ ನದಿಗೆ ಗಂಗಾ ಪೂಜೆ
ಯಕ್ಸಂಬಾ ಪಟ್ಟಣದ ರೈತರು ದೂಧಗಂಗಾ ನದಿಗೆ ಗಂಗಾ ಪೂಜೆ ಸಲ್ಲಿಸಿದರು
ಮಾಂಜರಿ 21: ಯಕ್ಸಂಬಾ ಪಟ್ಟಣದ ಕರ್ಲಹೊಂಡಲಿಂಗೇಶ್ವರ ಅನ್ನದಾನ ಸಮಿತಿ ವತಿಯಿಂದ ರೈತರು ಮತ್ತು ಸದಸ್ಯರು ಪ್ರಸಕ್ತ ಸಾಲಿನ ಮಳೆಗಾಲದಲ್ಲಿ ಸಮರ್ಪಕ ಮಳೆ ಸುರಿದು ದೂಧಗಂಗಾ ನದಿ ತುಂಬಿ ಹರಿಯುತ್ತಿರುವುದರಿಂದ ಶುಕ್ರವಾರ ದೂಧಗಂಗಾ ನದಿಗೆ ಗಂಗಾ ಪೂಜೆ ಸಲ್ಲಿಸಿ ಬಾಗಿನ ಅಪರ್ಿಸಿದರು.
ಪ್ರಾರಂಭದಲ್ಲಿ 5 ಜನ ಸುಮಂಗಲೆಯರಿಂದ ನದಿಯ ಪೂಜೆ ನೆರವೇರಿತು. ಕಳೆದ 2-3 ವರ್ಷಗಳಿಂದ ಮಳೆಗಾಲದಲ್ಲಿ ಮಳೆಯು ಸಂಪೂರ್ಣವಾಗಿ ಕೈಕೊಟ್ಟಿತ್ತು. ಆದರೆ ಈ ವರ್ಷ ಮಳೆಯ ಪ್ರಮಾಣ ಹೆಚ್ಚಿಗೆ ಆಗಿ ನದಿಗಳು ತುಂಬಿ ಹರಿಯುತ್ತಿರುವುದರಿಂದ ರೈತರಿಗೆ ಅನೂಕೂಲವಾಗಿದೆ. ಪಟ್ಟಣದ ದೂದಗಂಗಾ ನದಿಯ ಪಾತ್ರ ತುಂಬಿ ಹರಿಯುತ್ತಿದ್ದು, ಮಳೆ ಹೆಚ್ಚಿಗೆ ಆಗಿದ್ದರಿಂದ ಪಟ್ಟಣದ ರೈತರು ಮತ್ತು ಸಾರ್ವಜನಿಕರು ದೂಧಗಂಗಾ ನದಿಗೆ ಬಾಗಿನ ಅಪರ್ಿಸಿ ಪೂಜೆ ಸಲ್ಲಿಸಿದರು.
ಕರ್ಲಹೊಂಡಲಿಂಗೇಶ್ವರ ಅನ್ನದಾನ ಸಮಿತಿ ಅಧ್ಯಕ್ಷ ಮಹೇಶ ಬಾಕಳೆ, ಸುರೇಶ ಹಿರೇಮಠ, ದರೆಪ್ಪಾ ಖೋತ, ಪುಂಡಲೀಕ ಹಿಟಣೆ, ಬಾಬು ಬಾಕಳೆ, ನಿಂಗಪ್ಪಾ ದವಣೆ, ಸುರೇಶ ಕಬಾಡೆ, ಪುಂಡಲೀಕ ಸಾತ್ವರ, ಪಂಡಿತ ಜಾಧವ, ಶ್ರಾವಣ ರಾಯಮಾನೆ, ಅಣ್ಣಪ್ಪಾ ಖೋತ, ಮಾರುತಿ ಮಜಗೆ, ರಾಹುಲ್ ನಾಯಿಕ್, ವಿಠ್ಠಲ ನಾಯಿಕ್ ಸೇರಿದಂತೆ ರೈತರು, ಮಹಿಳೆಯರು ಉಪಸ್ಥಿತರಿದ್ದರು,
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 