ಸಂಭ್ರಮದಿಂದ ಗಂಗಾಪರಮೇಶ್ವರಿ ಜಯಂತಿ ಆಚರಣೆ
Gangaparameshwari Jayanti celebrated with enthusiasm
ಕಂಪ್ಲಿ:ಜೂ.20: ಪಟ್ಟಣದ ಗಂಗಾಮತ ಸಮಾಜದ ಸಮುದಾಯ ಭವನದಲ್ಲಿ ಗಂಗಾಪರಮೇಶ್ವರಿ ಜಯಂತ್ಯೋತ್ಸವ ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಶುಕ್ರವಾರ ಆಚರಿಸಲಾಯಿತು.
ಗಂಗಾಮತ ಸಮಾಜದ ತಾಲೂಕು ಅಧ್ಯಕ್ಷ ಎಲಿಗರ್ ನಾಗರಾಜ್ ಮಾತನಾಡಿ, ಗಂಗಾಮತ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಸಾಕಷ್ಟು ಹಿಂದುಳಿದ ಸಮಾಜವಾಗಿದೆ. ಗಂಗಾಮತ ಸಮಾಜದ ಅಭಿವೃದ್ಧಿಯ ದೃಷ್ಠಿಯಿಂದ ಎಸ್ಟಿ ಮೀಸಲಾತಿ ಅವಶ್ಯಕವಾಗಿದೆ. ಸಮಾಜದವರು ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಸಮಾಜವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಜಾಗೃತಿವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಬಿ.ಸಿದ್ದಪ್ಪ, ಕರೇಕಲ್ ಮನೋಹರ್, ಅಯ್ಯೋದಿ ವೆಂಕಟೇಶ್, ಧನರಾಜ್, ಯಲ್ಲಪ್ಪ, ಆಟೋ ರಾಘವೇಂದ್ರ, ವಿರುಪಣ್ಣ, ಜೋಳಮರೋ ಈರ್ಪ, ಎಲಿಗರ್ ವೀರಭದ್ರ್ಪ, ಮಹೇಶ, ಗಂಗಣ್ಣ, ರಾಮಸಾಗರ ದುರುಗಪ್ಪ, ಅಯ್ಯೋದಿ ರಮೇಶ್, ಎಲ್.ಗುರುರಾಜ, ಬಸವರಾಜ ಸೇರಿದಂತೆ ಸಮಾಜದವರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 