ಗಂಗಾವತಿ: ಮಕ್ಕಳಲ್ಲಿ ಪರಿಸರ ಜಾಗೃತಿ ಅವಶ್ಯ: ವಸ್ತ್ರದ
ಲೋಕದರ್ಶನ ವರದಿ
ಗಂಗಾವತಿ 05: ಪ್ರಾಥಮಿಕ ಶಾಲಾ ಹಂತದಲಿ ಮಕ್ಕಳಿಗೆ ಪರಸರ ಜಾಗೃತಿ ಮೂಡಿಸುವುದು ಪ್ರಸ್ತುತ ದಿನಮಾನಗಳಲ್ಲಿ ಅವಶ್ಯವಾಗಿದೆ ಎಂದು ಸೇಂಟ್ ಪಾಲ್ಸ್ ಮಹಿಳಾ ವಿದ್ಯಾ ಸಂಸ್ಥೆಯ ಕಾರ್ಯದಶರ್ಿ ಸವರ್ೇಶ ವಸ್ತ್ರದ ಹೇಳಿದರು.
ಅವರು ಸೇಂಟ್ ಪಾಲ್ಸ ಶಾಲೆಯ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾಡಿದರು. ಪ್ರಸ್ತುತ ದಿನಗಳಲ್ಲಿ ವರ್ಷದಿಂದ ವರ್ಷಕ್ಕೆ ತಾಪಮಾನ ಏರಿಕೆಯಾಗುತಿದ್ದು, ಮಳೆಯ ಪ್ರಮಾಣ ಕಡಿಯಾಗುತ್ತಿದೆ. ಗಿಡಮರಗಳ ನಾಶ ಮತ್ತು ಅರಣ್ಯ ಪ್ರದೇಶದ ಪ್ರಮಾಣ ಕಡಿಮೆಯಾಗುತ್ತಿದೆ. ಇದರಿಂದ ಪ್ರತಿ ವರ್ಷದಿಂದ ವರ್ಷಕ್ಕೆ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗುತ್ತಿದೆ. ಇವೆಲ್ಲಗಳಿಂದ ತಪ್ಪಿಸಿಕೊಳ್ಳಲು ಎಲ್ಲರೂ ಮನೆಗೊಂದು ಮರ ಬೆಳೆಸಲು ಮುಂದಾಗಬೇಕಿದೆ ಎಂದರು.
ಈ ವೇಳೆಯಲ್ಲಿ ಶಾಲಾ ಮಕ್ಕಳು 1918-2018ರವರೆಗೆ ಪರಸರ ಮತ್ತು ಮಳೆ ಬೆಳೆಯ ಕುರಿತು ಅಣಕು ಪ್ರದರ್ಶನ ಮಾಡುವ ಮೂಲಕ ಜಾಗೃತಿ ಮೂಡಿಸಿದರು. ಶಾಲಾ ಮಕ್ಕಳು ಮತ್ತು ಶಿಕ್ಷಕರು ಸಸಿ ನೆಡುವ ಮೂಲಕ ವಿಶ್ವ ಪರಿಸರವನ್ನು ಆಚರಣೆ ಮಾಡಿದರು.
ಈ ವೇಳೆಯಲ್ಲಿ ಸಂಸ್ಥೆಯ ಖಜಾಂಚಿ ಹುಸೇನ್ ಬಾದಷಹ, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪದ್ಮಾವತಿ, ಸಹ ಮುಖ್ಯೋಪಾಧ್ಯಾಯಿನಿ ಸುಹಾನ್, ಸಹ ಶಿಕ್ಷಕಿ ಶರಣಮ್ಮ, ಸ್ವಾತಿ ರಾಯ್ಕರ್, ಅಶ್ವಿನಿ, ಶಿರಿನ್, ಕು. ಅಫ್ರೀನ್, ಭವ್ಯಲತಾ, ಸೌಭಾಗ್ಯ, ಕು. ಅಮಿತಾ ಸೇರಿದಂತೆ ಇನ್ನಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 