ಗರ್ಭ ಸಂಸ್ಕಾರ: ವಿಶೇಷ ಜಾಗೃತಿ ಕಾರ್ಯಕ್ರಮ
Garbha Sanskar: Special awareness program
ಲೋಕದರ್ಶನ ವರದಿ
ಬೆಳಗಾವಿ 07: ಗರ್ಭಾವಸ್ಥೆಯಲ್ಲಿ ತಾಯಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯವು ಭವಿಷ್ಯದ ಮಗುವಿನ ಆರೋಗ್ಯದ ಮೇಲೆ ಮಹತ್ತರ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಸಾತ್ವಿಕ ಆಹಾರ, ಯೋಗಾಭ್ಯಾಸ, ಧ್ಯಾನ ಹಾಗೂ ಸದಾ ಸಕಾರಾತ್ಮಕ ಚಿಂತನೆಗಳನ್ನು ಪಾಲಿಸಬೇಕೆಂದು ಕೆಎಲ್ಇ ಆಸ್ಪತ್ರೆಯ ಪ್ರಸೂತಿ ವಿಭಾಗದ ವೈದ್ಯ ಡಾ. ಅರವಿಂದ ಮಿಣಚೆ ಅವರು ಸಲಹೆ ಹೇಳಿದರು.
ಕೆ ಎಲ್ ಇ ಆಯುರ್ವೇದ ಆಸ್ಪತ್ರೆಯಲ್ಲಿ ಗರ್ಭಿಣಿಯರ ಆರೋಗ್ಯ ಮತ್ತು ಉತ್ತಮ ಸಂತಾನದ ಬೆಳವಣಿಗೆಗೆ ಸಹಕಾರಿ ಆಗುವ ಗರ್ಭ ಸಂಸ್ಕಾರ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಚಾರ್ಯ ಡಾ ಕಿರಣ ಮುತ್ನಾಳಿ ಮಾತನಾಡುತ್ತಾ ಗರ್ಭಾವಸ್ಥೆಯ ಆರೈಕೆ, ಪೌಷ್ಟಿಕ ಆಹಾರ, ನಿಯಮಿತ ವೈದ್ಯಕೀಯ ತಪಾಸಣೆ ಮತ್ತು ಜೀವನ ಶೈಲಿಯ ಮಹತ್ವದ ಬಗ್ಗೆ ಗರ್ಭಿಣಿಯರಿಗೆ ಯೋಗ ಆಸನ, ಸಂಗೀತ ಚಿಕಿತ್ಸೆ ಮತ್ತು ಮಂತ್ರ ಚಿಕಿತ್ಸೆಯನ್ನು ಮತ್ತು ಪ್ರಾಣಾಯಾಮದ ಬಗ್ಗೆ ಹೇಳಿದರು.
ಸ್ರೀರೋಗ ಪ್ರಸೂತಿ ವೈದ್ಯರಾದ ಡಾ.ಅನಘಾ ಮತ್ತು ಡಾ. ಬಾಹುಬಲಿ ಮಹಾಜನ ಹಾಗೂ ಇತರ ಸಿಬ್ಬಂದಿ ಉಪಸ್ಥಿತರಿದ್ದರು. ಆಡಳಿತಾಧಿಕಾರಿ ಮಹಾಂತೇಶ ಗುಡ್ನವರ ನಿರೂಪಿಸಿ ವಂದಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 