ಗರ್ಭ ಸಂಸ್ಕಾರ: ವಿಶೇಷ ಜಾಗೃತಿ ಕಾರ್ಯಕ್ರಮ
Garbha Sanskar: Special awareness program
ಲೋಕದರ್ಶನ ವರದಿ
ಬೆಳಗಾವಿ 07: ಗರ್ಭಾವಸ್ಥೆಯಲ್ಲಿ ತಾಯಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯವು ಭವಿಷ್ಯದ ಮಗುವಿನ ಆರೋಗ್ಯದ ಮೇಲೆ ಮಹತ್ತರ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಸಾತ್ವಿಕ ಆಹಾರ, ಯೋಗಾಭ್ಯಾಸ, ಧ್ಯಾನ ಹಾಗೂ ಸದಾ ಸಕಾರಾತ್ಮಕ ಚಿಂತನೆಗಳನ್ನು ಪಾಲಿಸಬೇಕೆಂದು ಕೆಎಲ್ಇ ಆಸ್ಪತ್ರೆಯ ಪ್ರಸೂತಿ ವಿಭಾಗದ ವೈದ್ಯ ಡಾ. ಅರವಿಂದ ಮಿಣಚೆ ಅವರು ಸಲಹೆ ಹೇಳಿದರು.
ಕೆ ಎಲ್ ಇ ಆಯುರ್ವೇದ ಆಸ್ಪತ್ರೆಯಲ್ಲಿ ಗರ್ಭಿಣಿಯರ ಆರೋಗ್ಯ ಮತ್ತು ಉತ್ತಮ ಸಂತಾನದ ಬೆಳವಣಿಗೆಗೆ ಸಹಕಾರಿ ಆಗುವ ಗರ್ಭ ಸಂಸ್ಕಾರ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಚಾರ್ಯ ಡಾ ಕಿರಣ ಮುತ್ನಾಳಿ ಮಾತನಾಡುತ್ತಾ ಗರ್ಭಾವಸ್ಥೆಯ ಆರೈಕೆ, ಪೌಷ್ಟಿಕ ಆಹಾರ, ನಿಯಮಿತ ವೈದ್ಯಕೀಯ ತಪಾಸಣೆ ಮತ್ತು ಜೀವನ ಶೈಲಿಯ ಮಹತ್ವದ ಬಗ್ಗೆ ಗರ್ಭಿಣಿಯರಿಗೆ ಯೋಗ ಆಸನ, ಸಂಗೀತ ಚಿಕಿತ್ಸೆ ಮತ್ತು ಮಂತ್ರ ಚಿಕಿತ್ಸೆಯನ್ನು ಮತ್ತು ಪ್ರಾಣಾಯಾಮದ ಬಗ್ಗೆ ಹೇಳಿದರು.
ಸ್ರೀರೋಗ ಪ್ರಸೂತಿ ವೈದ್ಯರಾದ ಡಾ.ಅನಘಾ ಮತ್ತು ಡಾ. ಬಾಹುಬಲಿ ಮಹಾಜನ ಹಾಗೂ ಇತರ ಸಿಬ್ಬಂದಿ ಉಪಸ್ಥಿತರಿದ್ದರು. ಆಡಳಿತಾಧಿಕಾರಿ ಮಹಾಂತೇಶ ಗುಡ್ನವರ ನಿರೂಪಿಸಿ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 