ಕೊರೊನಾ ಸೋಂಕಿತ ಅಫ್ರಿದಿ ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ ಗೌತಮ್ ಗಂಭೀರ್
ನವದೆಹಲಿ, ಜೂನ್ 14,ಕ್ರೀಡಾಂಗಣದ ಹೊರಗೆ ಮತ್ತು ಒಳಗೆ ಎಷ್ಟೇ ಜಿದ್ದಾಜಿದ್ದಿನ ವೈರಿಗಳಾದರೂ, ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿರುವ ಪಾಕಿಸ್ತಾನದ ಮಾಜಿ ಆಲ್ರೌಂಡರ್ ಶಾಹಿದ್ ಅಫ್ರಿದಿ ಬಹುಬೇಗನೆ ಗುಣಮುಖರಾಗಲಿ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಹಾರೈಸುವ ಮೂಲಕ ಮಾನವೀಯತೆ ಪ್ರದರ್ಶಿಸಿದ್ದಾರೆ.ಕಾಶ್ಮೀರ ಗಡಿ ವಿಚಾರದಲ್ಲಿ ಆಗಾಗ ಮೂಗು ತೂರಿಸಿ ಅನಗತ್ಯ ಹೇಳಿಕೆಗಳನ್ನು ನೀಡುವ ಮೂಲಕ ಭಾರತೀಯ ಭಾವನೆಗಳನ್ನು ಕದಡುತ್ತಲೇ ಬಂದಿರುವ ಶಾಹಿದ್ ಅಫ್ರಿದಿ, ಶನಿವಾರವಷ್ಟೇ ತಾವು ಕೋವಿಡ್-19 ಸೋಂಕಿಗೆ ತುತ್ತಾಗಿರುವುದನ್ನು ಟ್ವಿಟರ್ ಮೂಲಕ ಬಹಿರಂಗಪಡಿಸಿದ್ದರು."ವೈರಸ್ಗೆ ಯಾರೊಬ್ಬರೂ ಕೂಡ ಸಿಲುಕಬಾರದು. ಶಾಹಿದ್ ಅಫ್ರಿದಿ ವಿರುದ್ಧ ರಾಜಕೀಯ ವಿಚಾರಗಳಲ್ಲಿ ವೈಮನಸ್ಸು ಇದೆ. ಆದರೆ ಅವರು ಬಹುಬೇಗನೆ ಚೇತರಿಸಲಿ ಎಂದು ಬಯಸುತ್ತೇನೆ. ಅಫ್ರಿದಿ ಅಷ್ಟೇ ಅಲ್ಲ ನನ್ನ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿರುವ ಪ್ರತಿಯೊಬ್ಬ ವ್ಯಕ್ತಿಯೂ ಬಹುಬೇಗ ಚೇತರಿಸಲಿ ಎಂಬುದು ನನ್ನ ಬಯಕೆ," ಎಂದು ಸುದ್ದಿ ವಾಹಿನಿಗೆ ಗಂಭೀರ್ ಹೇಳಿಕೆ ನೀಡಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 