ಕೊರೊನಾ ಸೋಂಕಿತ ಅಫ್ರಿದಿ ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ ಗೌತಮ್ ಗಂಭೀರ್
ನವದೆಹಲಿ, ಜೂನ್ 14,ಕ್ರೀಡಾಂಗಣದ ಹೊರಗೆ ಮತ್ತು ಒಳಗೆ ಎಷ್ಟೇ ಜಿದ್ದಾಜಿದ್ದಿನ ವೈರಿಗಳಾದರೂ, ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿರುವ ಪಾಕಿಸ್ತಾನದ ಮಾಜಿ ಆಲ್ರೌಂಡರ್ ಶಾಹಿದ್ ಅಫ್ರಿದಿ ಬಹುಬೇಗನೆ ಗುಣಮುಖರಾಗಲಿ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಹಾರೈಸುವ ಮೂಲಕ ಮಾನವೀಯತೆ ಪ್ರದರ್ಶಿಸಿದ್ದಾರೆ.ಕಾಶ್ಮೀರ ಗಡಿ ವಿಚಾರದಲ್ಲಿ ಆಗಾಗ ಮೂಗು ತೂರಿಸಿ ಅನಗತ್ಯ ಹೇಳಿಕೆಗಳನ್ನು ನೀಡುವ ಮೂಲಕ ಭಾರತೀಯ ಭಾವನೆಗಳನ್ನು ಕದಡುತ್ತಲೇ ಬಂದಿರುವ ಶಾಹಿದ್ ಅಫ್ರಿದಿ, ಶನಿವಾರವಷ್ಟೇ ತಾವು ಕೋವಿಡ್-19 ಸೋಂಕಿಗೆ ತುತ್ತಾಗಿರುವುದನ್ನು ಟ್ವಿಟರ್ ಮೂಲಕ ಬಹಿರಂಗಪಡಿಸಿದ್ದರು."ವೈರಸ್ಗೆ ಯಾರೊಬ್ಬರೂ ಕೂಡ ಸಿಲುಕಬಾರದು. ಶಾಹಿದ್ ಅಫ್ರಿದಿ ವಿರುದ್ಧ ರಾಜಕೀಯ ವಿಚಾರಗಳಲ್ಲಿ ವೈಮನಸ್ಸು ಇದೆ. ಆದರೆ ಅವರು ಬಹುಬೇಗನೆ ಚೇತರಿಸಲಿ ಎಂದು ಬಯಸುತ್ತೇನೆ. ಅಫ್ರಿದಿ ಅಷ್ಟೇ ಅಲ್ಲ ನನ್ನ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿರುವ ಪ್ರತಿಯೊಬ್ಬ ವ್ಯಕ್ತಿಯೂ ಬಹುಬೇಗ ಚೇತರಿಸಲಿ ಎಂಬುದು ನನ್ನ ಬಯಕೆ," ಎಂದು ಸುದ್ದಿ ವಾಹಿನಿಗೆ ಗಂಭೀರ್ ಹೇಳಿಕೆ ನೀಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 