ಕೊರೊನಾ ಸೋಂಕಿತ ಅಫ್ರಿದಿ ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ ಗೌತಮ್ ಗಂಭೀರ್
ನವದೆಹಲಿ, ಜೂನ್ 14,ಕ್ರೀಡಾಂಗಣದ ಹೊರಗೆ ಮತ್ತು ಒಳಗೆ ಎಷ್ಟೇ ಜಿದ್ದಾಜಿದ್ದಿನ ವೈರಿಗಳಾದರೂ, ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿರುವ ಪಾಕಿಸ್ತಾನದ ಮಾಜಿ ಆಲ್ರೌಂಡರ್ ಶಾಹಿದ್ ಅಫ್ರಿದಿ ಬಹುಬೇಗನೆ ಗುಣಮುಖರಾಗಲಿ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಹಾರೈಸುವ ಮೂಲಕ ಮಾನವೀಯತೆ ಪ್ರದರ್ಶಿಸಿದ್ದಾರೆ.ಕಾಶ್ಮೀರ ಗಡಿ ವಿಚಾರದಲ್ಲಿ ಆಗಾಗ ಮೂಗು ತೂರಿಸಿ ಅನಗತ್ಯ ಹೇಳಿಕೆಗಳನ್ನು ನೀಡುವ ಮೂಲಕ ಭಾರತೀಯ ಭಾವನೆಗಳನ್ನು ಕದಡುತ್ತಲೇ ಬಂದಿರುವ ಶಾಹಿದ್ ಅಫ್ರಿದಿ, ಶನಿವಾರವಷ್ಟೇ ತಾವು ಕೋವಿಡ್-19 ಸೋಂಕಿಗೆ ತುತ್ತಾಗಿರುವುದನ್ನು ಟ್ವಿಟರ್ ಮೂಲಕ ಬಹಿರಂಗಪಡಿಸಿದ್ದರು."ವೈರಸ್ಗೆ ಯಾರೊಬ್ಬರೂ ಕೂಡ ಸಿಲುಕಬಾರದು. ಶಾಹಿದ್ ಅಫ್ರಿದಿ ವಿರುದ್ಧ ರಾಜಕೀಯ ವಿಚಾರಗಳಲ್ಲಿ ವೈಮನಸ್ಸು ಇದೆ. ಆದರೆ ಅವರು ಬಹುಬೇಗನೆ ಚೇತರಿಸಲಿ ಎಂದು ಬಯಸುತ್ತೇನೆ. ಅಫ್ರಿದಿ ಅಷ್ಟೇ ಅಲ್ಲ ನನ್ನ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿರುವ ಪ್ರತಿಯೊಬ್ಬ ವ್ಯಕ್ತಿಯೂ ಬಹುಬೇಗ ಚೇತರಿಸಲಿ ಎಂಬುದು ನನ್ನ ಬಯಕೆ," ಎಂದು ಸುದ್ದಿ ವಾಹಿನಿಗೆ ಗಂಭೀರ್ ಹೇಳಿಕೆ ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 