ಭಾರತ -ಆಸ್ಟ್ರೇಲಿಯಾ ಮೊದಲ ಟೆಸ್ಟ್ ನಂತರ ದಿಢೀರ್ ಭಾರತಕ್ಕೆ ವಾಪಸಾದ ಮುಖ್ಯ ಕೋಚ್ ಗೌತಮ್ ಗಂಭೀರ್
ಮುಖ್ಯ ಕೋಚ್ ಗೌತಮ್ ಗಂಭೀರ್
ಪರ್ತ್ 26: ಆಸ್ಟ್ರೇಲಿಯಾದ ಪರ್ತ್ನಲ್ಲಿ ಭಾರತ -ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಸೋಮವಾರ ಮುಕ್ತಾಯವಾಗಿದ್ದು, ಮಂಗಳವಾರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ದಿಢೀರ್ ಆಗಿ ತವರಿಗೆ ಮರಳಿದ್ದಾರೆ.
ವೈಯುಕ್ತಿಕ ತುರ್ತು ಸನ್ನಿವೇಶದ ಹಿನ್ನಲೆಯಲ್ಲಿ ಕೋಚ್ ಗೌತಮ್ ಗಂಭೀರ್ ಭಾರತಕ್ಕೆ ವಾಪಸಾಗಿದ್ದು, ಕುಟುಂಬ ಸಮೇತರಾಗಿ ಭಾರತಕ್ಕೆ ಮರಳಿದ್ದಾರೆ ಎಂದು ತಿಳಿದುಬಂದಿದೆ.
ನವೆಂಬರ್ 30 ರಿಂದ ಕ್ಯಾನ್ಬೆರಾದಲ್ಲಿ ಪ್ರಾರಂಭವಾಗುವ ಎರಡು ದಿನಗಳ ಪಿಂಕ್ ಬಾಲ್ ಅಭ್ಯಾಸ ಪಂದ್ಯದಲ್ಲಿ ಭಾಗವಹಿಸುವ ಸಾಧ್ಯತೆಯಿಲ್ಲ ಎನ್ನಲಾಗಿದೆ.
ಗಂಭೀರ್ ತಮ್ಮ ವಾಪಸಾತಿಗೆ ಸಂಬಂಧಿಸಿದಂತೆ ಬಿಸಿಸಿಐನ ಅನುಮತಿ ಕೋರಿದ್ದಾರೆ ಎಂದು ಬಿಸಿಸಿಐನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅನಿವಾರ್ಯ ವೈಯಕ್ತಿಕ ತುರ್ತುಸ್ಥಿತಿಯಿಂದಾಗಿ ಗಂಭೀರ್ ಅವರು ಬಿಸಿಸಿಐ ಅನುಮತಿ ಮೇರೆಗೆ ಮಂಗಳವಾರ ಮುಂಜಾನೆ ತಮ್ಮ ಕುಟುಂಬದೊಂದಿಗೆ ಭಾರತಕ್ಕೆ ವಾಪಸ್ ಆಗಿದ್ದಾರೆ.
ಅಡಿಲೇಡ್ನಲ್ಲಿ ಡಿಸೆಂಬರ್ 6ರಂದು ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಅವರು ತಂಡವನ್ನು ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 