ಶಾಹೀದ್ ಅಫ್ರಿದಿಗೆ ಗೌತಮ್ ಗಂಭೀರ್ ತಿರುಗೇಟು
ನವದೆಹಲಿ, ಆ 6 ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ಪ್ರಕಾರ ನೀಡಿದ್ದ ವಿಶೇಷ ಸ್ಥಾನಮಾನವನ್ನು ಸೋಮವಾರ ಕೇಂದ್ರ ಸರ್ಕಾರ ರದ್ದುಗೊಳಿಸಿದ್ದ ಬೆನ್ನಲ್ಲೆ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹೀದ್ ಅಫ್ರಿದಿ ಅವರು ಇದಕ್ಕೆ ವಿರೋಧ ವ್ಯಕ್ತಪಡಿಸಿ ವಿಶ್ವಸಂಸ್ಥೆ ಹಾಗೂ ಅಮೆರಿಕ ಮಧ್ಯೆ ಪ್ರವೇಶಿಸಬೇಕು ಎಂದು ಟ್ವೀಟ್ ಮಾಡಿದ್ದರು.
ಪಾಕಿಸ್ತಾನ ತಂಡದ ಮಾಜಿ ನಾಯಕನಿಗೆ ಮಾಜಿ ಕ್ರಿಕೆಟಿಗ ಹಾಗೂ ಸಂಸದ ಗೌತಮ್ ಗಂಭೀರ್ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
ಸೋಮವಾರ ಜಮ್ಮು ಕಾಶ್ಮೀರದಲ್ಲಿ 370 ಮತ್ತು 35 ಎ ವಿಧಿಯನ್ನು ರದ್ದುಗೊಳಿಸಿದ್ದ ಕೇಂದ್ರ ಸರ್ಕಾರ, ಜಮ್ಮು ಮತ್ತು ಕಾಶ್ಮೀರ ಪುನರ್ವಿಂಗಡನೆ ಮಸೂದೆಯನ್ನು ರಾಜ್ಯಸಭೆ ಅಂಗೀಕರಿಸಿದ ಕೆಲವೇ ಗಂಟೆಗಳ ನಂತರ ಶಾಹೀದ್ ಅಫ್ರಿದಿ ಈ ಕುರಿತು ಟ್ವೀಟ್ ಮಾಡಿದ್ದರು.
" ವಿಶ್ವಸಂಸ್ಥೆಯನ್ನು ಏಕೆ ರಚಿಸಲಾಗಿದೆ ? ಇದೀಗ ಅದು ಏಕೆ ನಿದ್ರಿಸುತ್ತಿದೆ ? ಮಾನವೀಯತೆಯ ವಿರುದ್ಧ ಕಾಶ್ಮೀರದಲ್ಲಿ ನಡೆಯುತ್ತಿರುವ ಅಪ್ರಚೋದಿತ ಆಕ್ರಮಣ ಮತ್ತು ಅಪರಾಧಗಳನ್ನು ಗಮನಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಬೇಕು ಎಂದು ಸೋಮವಾರ ಅಫ್ರಿದಿ ಟ್ವೀಟ್ ಮಾಡಿದ್ದರು.
ಇದಕ್ಕೇ ಸಂಸದ ಗೌತಮ್ ಗಂಭೀರ್ ತಿರುಗೇಟು ನೀಡಿ, " ಕಣಿವೆ ರಾಜ್ಯದಲ್ಲಿ ಅಪ್ರಚೋದಿತ ಆಕ್ರಮಣ ನಡೆಯುತ್ತಿದ್ದು, ಮಾನವೀಯತೆಯ ವಿರುದ್ಧ ಅಪರಾಧಗಳು ನಡೆಯುತ್ತಿವೆ. ಈ ವಿಷಯಗಳ ಪರಿಹರಿಸುವ ನಿಟ್ಟಿನಲ್ಲಿ ಅಫ್ರಿದಿ ಧನಿ ಎತ್ತಲಿ ಎಂದು ಹೇಳಿದ್ದಾರೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇವೆಲ್ಲವೂ ನಡೆಯುತ್ತಿದೆ ಎಂದು ಹೇಳುವುದನ್ನು ಮರೆತಿದ್ದೇನೆ. ಚಿಂತಿಸಬೇಡಿ, ಇದನ್ನು ಬಗೆಹರಿಸುತ್ತೇವೆ ಮಗನೇ!!! ಎಂದು ಖಾರವಾಗಿ ಅಫ್ರಿದಿಗೆ ಗಂಭಿರ್ ತಿರುಗೇಟು ನೀಡಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 