ಶಾಹೀದ್ ಅಫ್ರಿದಿಗೆ ಗೌತಮ್ ಗಂಭೀರ್ ತಿರುಗೇಟು
ನವದೆಹಲಿ, ಆ 6 ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ಪ್ರಕಾರ ನೀಡಿದ್ದ ವಿಶೇಷ ಸ್ಥಾನಮಾನವನ್ನು ಸೋಮವಾರ ಕೇಂದ್ರ ಸರ್ಕಾರ ರದ್ದುಗೊಳಿಸಿದ್ದ ಬೆನ್ನಲ್ಲೆ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹೀದ್ ಅಫ್ರಿದಿ ಅವರು ಇದಕ್ಕೆ ವಿರೋಧ ವ್ಯಕ್ತಪಡಿಸಿ ವಿಶ್ವಸಂಸ್ಥೆ ಹಾಗೂ ಅಮೆರಿಕ ಮಧ್ಯೆ ಪ್ರವೇಶಿಸಬೇಕು ಎಂದು ಟ್ವೀಟ್ ಮಾಡಿದ್ದರು.
ಪಾಕಿಸ್ತಾನ ತಂಡದ ಮಾಜಿ ನಾಯಕನಿಗೆ ಮಾಜಿ ಕ್ರಿಕೆಟಿಗ ಹಾಗೂ ಸಂಸದ ಗೌತಮ್ ಗಂಭೀರ್ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
ಸೋಮವಾರ ಜಮ್ಮು ಕಾಶ್ಮೀರದಲ್ಲಿ 370 ಮತ್ತು 35 ಎ ವಿಧಿಯನ್ನು ರದ್ದುಗೊಳಿಸಿದ್ದ ಕೇಂದ್ರ ಸರ್ಕಾರ, ಜಮ್ಮು ಮತ್ತು ಕಾಶ್ಮೀರ ಪುನರ್ವಿಂಗಡನೆ ಮಸೂದೆಯನ್ನು ರಾಜ್ಯಸಭೆ ಅಂಗೀಕರಿಸಿದ ಕೆಲವೇ ಗಂಟೆಗಳ ನಂತರ ಶಾಹೀದ್ ಅಫ್ರಿದಿ ಈ ಕುರಿತು ಟ್ವೀಟ್ ಮಾಡಿದ್ದರು.
" ವಿಶ್ವಸಂಸ್ಥೆಯನ್ನು ಏಕೆ ರಚಿಸಲಾಗಿದೆ ? ಇದೀಗ ಅದು ಏಕೆ ನಿದ್ರಿಸುತ್ತಿದೆ ? ಮಾನವೀಯತೆಯ ವಿರುದ್ಧ ಕಾಶ್ಮೀರದಲ್ಲಿ ನಡೆಯುತ್ತಿರುವ ಅಪ್ರಚೋದಿತ ಆಕ್ರಮಣ ಮತ್ತು ಅಪರಾಧಗಳನ್ನು ಗಮನಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಬೇಕು ಎಂದು ಸೋಮವಾರ ಅಫ್ರಿದಿ ಟ್ವೀಟ್ ಮಾಡಿದ್ದರು.
ಇದಕ್ಕೇ ಸಂಸದ ಗೌತಮ್ ಗಂಭೀರ್ ತಿರುಗೇಟು ನೀಡಿ, " ಕಣಿವೆ ರಾಜ್ಯದಲ್ಲಿ ಅಪ್ರಚೋದಿತ ಆಕ್ರಮಣ ನಡೆಯುತ್ತಿದ್ದು, ಮಾನವೀಯತೆಯ ವಿರುದ್ಧ ಅಪರಾಧಗಳು ನಡೆಯುತ್ತಿವೆ. ಈ ವಿಷಯಗಳ ಪರಿಹರಿಸುವ ನಿಟ್ಟಿನಲ್ಲಿ ಅಫ್ರಿದಿ ಧನಿ ಎತ್ತಲಿ ಎಂದು ಹೇಳಿದ್ದಾರೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇವೆಲ್ಲವೂ ನಡೆಯುತ್ತಿದೆ ಎಂದು ಹೇಳುವುದನ್ನು ಮರೆತಿದ್ದೇನೆ. ಚಿಂತಿಸಬೇಡಿ, ಇದನ್ನು ಬಗೆಹರಿಸುತ್ತೇವೆ ಮಗನೇ!!! ಎಂದು ಖಾರವಾಗಿ ಅಫ್ರಿದಿಗೆ ಗಂಭಿರ್ ತಿರುಗೇಟು ನೀಡಿದ್ದಾರೆ
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 