ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಧಾರ್ಮಿಕ ಸಾಮಾಜಿಕ ಸಾಂಪ್ರದಾಯಿಕ ಕಾರ್ಯಕ್ರಮಗಳ ಸಂಗಮ
Gavisiddeshwara Jatra Mahotsav is a confluence of religious, social and traditional programs
ಕೊಪ್ಪಳ 31: ದಕ್ಷಿಣ ಭಾರತದ ಕುಂಭಮೇಳವೆಂದು ಪ್ರಖ್ಯಾತಿ ಪಡೆದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಧಾರ್ಮಿಕ ಸಾಮಾಜಿಕ ಸಾಂಪ್ರದಾಯಿಕ ಕಾರ್ಯಕ್ರಮಗಳ ಸಂಗಮ. ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯ ನಾಡಿನ ಅನೇಕ ಭಕ್ತರು ವಿವಿಧ ವಿಶಿಷ್ಟ ಭಕ್ತಿ ಸೇವೆಗಳನ್ನು ಸಲ್ಲಿಸುವುದರ ಮೂಲಕ ಭಕ್ತಿ ಅರ್ಿಸುವದು ಅಪ್ಯಾಯಮಾನ ಹಾಗೆಯೇ ಜಹಗಿರ್ ಗುಡುದೂರಿನ ಸ್ನೇಹ ಜೀವಿ ಗೆಳೆಯರ ಬಳಗ ಲೈಟಿಂಗ್ ಅರೇಂಜೈಂಟ್ ಸೇವಾ ಮಂಡಳಿಯಿಂದ ಮಹಾ ಜಾತ್ರೋತ್ಸವಕ್ಕೆ ವಿವಿಧ ಬಣ್ಣ ಬಣ್ಣದ ವಿಶಿಷ್ಟ ಆಕರ್ಷಕ ಲೈಟಿಂಗ್ ಗಳನ್ನ ಗಂಜವೃತ್ತದಲ್ಲಿರುವ ಶ್ರೀ ಗವಿಸಿದ್ದೇಶ್ವರ ಮಹಾದ್ವಾರಕ್ಕೆ ತಮ್ಮ ಸೇವಾ ಸಮಿತಿ ವತಿಯಿಂದ ಉಚಿತವಾಗಿ ದೀಪ ಅಲಂಕಾರ ಗೊಳಿಸುವ ಮೂಲಕ ಜಾತ್ರಿಯ ವಿದ್ಯುತ್ ದೀಪ ಅಲಂಕಾರಕ್ಕೆ ಮತ್ತಷ್ಟು ಮೆರಗು ತಂದಿದ್ದಾರೆ. ವಿವಿಧ ಬಣ್ಣ ಬಣ್ಣದ ವಿದ್ಯುತ್ ದೀಪ ಅಲಂಕಾರ ಮಾಡಿದ್ದಾರೆ. 10 ಯುವಕರು ಒಂದು ದಿನ ಪೂರ್ತಿಯಾಗಿ ಈ ದೀಪಾಲಂಕಾರದ ಅಲಂಕಾರಿಕೆಯಲ್ಲಿ ತೊಡಗಿಕೊಂಡು ಸೇವೆಗೈದಿರುತ್ತಾರೆ. ಶ್ರೀ ಗವಿಸಿದ್ದೇಶ್ವರ ದ್ವಾರಬಾಗಿಲಿಗೆ ಇಂದು ಎರಡನೇ ಬಾರಿ ಅಲಂಕಾರ ಮಾಡಿದ್ದಾರೆ ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 