ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಧಾರ್ಮಿಕ ಸಾಮಾಜಿಕ ಸಾಂಪ್ರದಾಯಿಕ ಕಾರ್ಯಕ್ರಮಗಳ ಸಂಗಮ
Gavisiddeshwara Jatra Mahotsav is a confluence of religious, social and traditional programs
ಕೊಪ್ಪಳ 31: ದಕ್ಷಿಣ ಭಾರತದ ಕುಂಭಮೇಳವೆಂದು ಪ್ರಖ್ಯಾತಿ ಪಡೆದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಧಾರ್ಮಿಕ ಸಾಮಾಜಿಕ ಸಾಂಪ್ರದಾಯಿಕ ಕಾರ್ಯಕ್ರಮಗಳ ಸಂಗಮ. ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯ ನಾಡಿನ ಅನೇಕ ಭಕ್ತರು ವಿವಿಧ ವಿಶಿಷ್ಟ ಭಕ್ತಿ ಸೇವೆಗಳನ್ನು ಸಲ್ಲಿಸುವುದರ ಮೂಲಕ ಭಕ್ತಿ ಅರ್ಿಸುವದು ಅಪ್ಯಾಯಮಾನ ಹಾಗೆಯೇ ಜಹಗಿರ್ ಗುಡುದೂರಿನ ಸ್ನೇಹ ಜೀವಿ ಗೆಳೆಯರ ಬಳಗ ಲೈಟಿಂಗ್ ಅರೇಂಜೈಂಟ್ ಸೇವಾ ಮಂಡಳಿಯಿಂದ ಮಹಾ ಜಾತ್ರೋತ್ಸವಕ್ಕೆ ವಿವಿಧ ಬಣ್ಣ ಬಣ್ಣದ ವಿಶಿಷ್ಟ ಆಕರ್ಷಕ ಲೈಟಿಂಗ್ ಗಳನ್ನ ಗಂಜವೃತ್ತದಲ್ಲಿರುವ ಶ್ರೀ ಗವಿಸಿದ್ದೇಶ್ವರ ಮಹಾದ್ವಾರಕ್ಕೆ ತಮ್ಮ ಸೇವಾ ಸಮಿತಿ ವತಿಯಿಂದ ಉಚಿತವಾಗಿ ದೀಪ ಅಲಂಕಾರ ಗೊಳಿಸುವ ಮೂಲಕ ಜಾತ್ರಿಯ ವಿದ್ಯುತ್ ದೀಪ ಅಲಂಕಾರಕ್ಕೆ ಮತ್ತಷ್ಟು ಮೆರಗು ತಂದಿದ್ದಾರೆ. ವಿವಿಧ ಬಣ್ಣ ಬಣ್ಣದ ವಿದ್ಯುತ್ ದೀಪ ಅಲಂಕಾರ ಮಾಡಿದ್ದಾರೆ. 10 ಯುವಕರು ಒಂದು ದಿನ ಪೂರ್ತಿಯಾಗಿ ಈ ದೀಪಾಲಂಕಾರದ ಅಲಂಕಾರಿಕೆಯಲ್ಲಿ ತೊಡಗಿಕೊಂಡು ಸೇವೆಗೈದಿರುತ್ತಾರೆ. ಶ್ರೀ ಗವಿಸಿದ್ದೇಶ್ವರ ದ್ವಾರಬಾಗಿಲಿಗೆ ಇಂದು ಎರಡನೇ ಬಾರಿ ಅಲಂಕಾರ ಮಾಡಿದ್ದಾರೆ ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 