ಅಂಗವಿಕಲರು ಯೋಜನೆಗಳ ಸದುಪಯೋಗ ಪಡೆಯಬೇಕು: ಹೊನ್ನವ್ವ
ಲೋಕದರ್ಶನವರದಿ
ರಾಣೇಬೆನ್ನೂರು-ಫೆ.14: ತಾಲೂಕಿನ ಆರೇಮಲ್ಲಾಪೂರ ಗ್ರಾಮದಲ್ಲಿ ಅಂಗವಿಕಲರ ಅನುದಾನದಲ್ಲಿ ಗ್ರಾಪಂ ವತಿಯಿಂದ 14 ನೇ ಹಣಕಾಸು ಯೋಜನೆಯ ಅಡಿಯಲ್ಲಿ ಖರೀದಿಸಲಾದ ಸುಮಾರು 60 ಸ್ಟೀಲ್ ಟಾಕಿಗಳನ್ನು ಶುಕ್ರವಾರ ಅಂಗವಿಕಲರಿಗೆ ವಿತರಿಸಲಾಯಿತು.
ಗ್ರಾಪಂ ಅಧ್ಯಕ್ಷೆ ಹೊನ್ನವ್ವ ಓಲೇಕಾರ ಟಾಕೀಗಳನ್ನು ವಿತರಿಸಿ ಗ್ರಾಪಂನಿಂದ ಖರೀದಿಸಿ ಈ ವಸ್ತುಗಳನ್ನು ಅಂಗವಿಕಲರಿಗೆ ವಿತರಿಸಲಾಗಿದ್ದು, ಇವುಗಳ ಸದುಪಯೋಗವಾಗಬೇಕು, ಮುಂದಿನ ದಿನಮಾನಗಳಲ್ಲಿ ಅಂಗವಿಕಲರಿಗೆ ವಿಶೇಷ ಯೋಜನೆಗಳಲ್ಲಿ ವಸ್ತುಗಳನ್ನು ವಿತರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಗ್ರಾಪಂ ಉಪಾಧ್ಯಕ್ಷ ಪರಶುರಾಮ ಮಿಳ್ಳಿ, ಮಾಜಿ ಉಪಾಧ್ಯಕ್ಷ ಕರಿಯಪ್ಪ ಶ್ಯಾಮಣ್ಣನವರ, ಪಿಡಿಓ ಡಿಬಿ ಹರಿಜನ, ಸದಸ್ಯರುಗಳಾದ ಶಿವಕುಮಾರ ಶೆಟ್ಟರ, ಶಾರದಾ ಬೇವಿನಮರದ, ಮಂಜವ್ವ ಮಗ್ಗದ, ವೀರಭದ್ರಯ್ಯ ಸಂದಿಮನಿ, ವಿಜಯ ಮಿಳ್ಳಿ, ಕೃಷ್ಣಾಜಿ ಆರೇರ, ಮಂಜುನಾಥ ಸಂಗನವರ ಸೇರಿದಂತೆ ಗ್ರಾಪಂ ಸದಸ್ಯರುಗಳು, ಸಿಬ್ಬಂದಿಗಳು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 