ಅಂಗವಿಕಲರು ಯೋಜನೆಗಳ ಸದುಪಯೋಗ ಪಡೆಯಬೇಕು: ಹೊನ್ನವ್ವ
ಲೋಕದರ್ಶನವರದಿ
ರಾಣೇಬೆನ್ನೂರು-ಫೆ.14: ತಾಲೂಕಿನ ಆರೇಮಲ್ಲಾಪೂರ ಗ್ರಾಮದಲ್ಲಿ ಅಂಗವಿಕಲರ ಅನುದಾನದಲ್ಲಿ ಗ್ರಾಪಂ ವತಿಯಿಂದ 14 ನೇ ಹಣಕಾಸು ಯೋಜನೆಯ ಅಡಿಯಲ್ಲಿ ಖರೀದಿಸಲಾದ ಸುಮಾರು 60 ಸ್ಟೀಲ್ ಟಾಕಿಗಳನ್ನು ಶುಕ್ರವಾರ ಅಂಗವಿಕಲರಿಗೆ ವಿತರಿಸಲಾಯಿತು.
ಗ್ರಾಪಂ ಅಧ್ಯಕ್ಷೆ ಹೊನ್ನವ್ವ ಓಲೇಕಾರ ಟಾಕೀಗಳನ್ನು ವಿತರಿಸಿ ಗ್ರಾಪಂನಿಂದ ಖರೀದಿಸಿ ಈ ವಸ್ತುಗಳನ್ನು ಅಂಗವಿಕಲರಿಗೆ ವಿತರಿಸಲಾಗಿದ್ದು, ಇವುಗಳ ಸದುಪಯೋಗವಾಗಬೇಕು, ಮುಂದಿನ ದಿನಮಾನಗಳಲ್ಲಿ ಅಂಗವಿಕಲರಿಗೆ ವಿಶೇಷ ಯೋಜನೆಗಳಲ್ಲಿ ವಸ್ತುಗಳನ್ನು ವಿತರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಗ್ರಾಪಂ ಉಪಾಧ್ಯಕ್ಷ ಪರಶುರಾಮ ಮಿಳ್ಳಿ, ಮಾಜಿ ಉಪಾಧ್ಯಕ್ಷ ಕರಿಯಪ್ಪ ಶ್ಯಾಮಣ್ಣನವರ, ಪಿಡಿಓ ಡಿಬಿ ಹರಿಜನ, ಸದಸ್ಯರುಗಳಾದ ಶಿವಕುಮಾರ ಶೆಟ್ಟರ, ಶಾರದಾ ಬೇವಿನಮರದ, ಮಂಜವ್ವ ಮಗ್ಗದ, ವೀರಭದ್ರಯ್ಯ ಸಂದಿಮನಿ, ವಿಜಯ ಮಿಳ್ಳಿ, ಕೃಷ್ಣಾಜಿ ಆರೇರ, ಮಂಜುನಾಥ ಸಂಗನವರ ಸೇರಿದಂತೆ ಗ್ರಾಪಂ ಸದಸ್ಯರುಗಳು, ಸಿಬ್ಬಂದಿಗಳು ಇದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 