ಇಂದಿನಿಂದ ಗೈಬಿಸಾಬ್ ದರ್ಗಾ ಉರುಸು
Ghaibisab Dargah Urs from today
ಲೋಕದರ್ಶನ ವರದಿ
ಬೀಳಗಿ 20: ತಾಲೂಕಿನ ಯಡಹಳ್ಳಿ (ಗಲಗಲಿ) ಹಜರತ್ ಪೀರ್ ಗೈಬಿಸಾಬ್ ದರ್ಗಾ ಹಿಂದೂ-ಮುಸ್ಲಿಂ ಭಾವೈಕ್ಯ ಕೇಂದ್ರವಾಗಿದ್ದು, ಮಾ.21 ರಂದು ಉರುಸು ನಡೆಯಲಿದೆ. ಈ ಬಾರಿಯೂ ಮೂರು ದಿನ ಉರುಸು ಅದ್ದೂರಿಯಾಗಿ ಜರುಗಲಿದ್ದು, ನಾನಾ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಉರುಸು ದಿವಸ ಮಹರ್ಷಿ ವಾಲ್ಮೀಕಿ ನಾಟ್ಯ ಸಂಘದಿಂದ ಕಲಿಯುಗದಲ್ಲಿ ಘರ್ಜಿಸಿದ ಕರ್ಣಾರ್ಜುನ ಎಂದು ಸಾಮಾಜಿಕ ನಾಟಕ ನಡೆಯಲಿದೆ ಎಂದು ದರ್ಗಾ ಅಧ್ಯಕ್ಷ ಮೌಲಾಸಾಬ್ ಜಮಾದಾರ, ಕಾರ್ಯದರ್ಶಿ ಭಾಷಾಸಾಬ್ ಚಿಕ್ಕಗಲಗಲಿ ತಿಳಿಸಿದ್ದಾರೆ. ಹಿಂದೂ-ಮುಸ್ಲಿಂ ಸಮುದಾಯಕ್ಕೂ ಪವಿತ್ರ ಕ್ಷೇತ್ರವಾಗಿರುವ ಈ ದರ್ಗಾಕ್ಕೆ ಐತಿಹಾಸಿಕ ಹಿನ್ನೆಲೆಯಿದೆ. ದೇಸಾಯಿ ಮನೆತನದ ಗಲೀಫ್ ಹಾಗೂ ನೈವೇದ್ಯ ಆರ್ಿಸಿದ ಮೇಲೆಯೇ ಉರುಸು ಆರಂಭವಾಗುತ್ತದೆ. ಸುತ್ತಮುತ್ತಲಿನ ಜನತೆ ಜಾತಿ ಭೇದವಿಲ್ಲದೇ ಎಲ್ಲರೂ ಮನೆಗಳನ್ನು ಶೃಂಗರಿಸುವ ಮೂಲಕ ಉರುಸಿನಲ್ಲಿ ಭಕ್ತಿಯಿಂದ ಭಾಗವಹಿಸುತ್ತಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 