ಇಂದಿನಿಂದ ಗೈಬಿಸಾಬ್ ದರ್ಗಾ ಉರುಸು
Ghaibisab Dargah Urs from today
ಲೋಕದರ್ಶನ ವರದಿ
ಬೀಳಗಿ 20: ತಾಲೂಕಿನ ಯಡಹಳ್ಳಿ (ಗಲಗಲಿ) ಹಜರತ್ ಪೀರ್ ಗೈಬಿಸಾಬ್ ದರ್ಗಾ ಹಿಂದೂ-ಮುಸ್ಲಿಂ ಭಾವೈಕ್ಯ ಕೇಂದ್ರವಾಗಿದ್ದು, ಮಾ.21 ರಂದು ಉರುಸು ನಡೆಯಲಿದೆ. ಈ ಬಾರಿಯೂ ಮೂರು ದಿನ ಉರುಸು ಅದ್ದೂರಿಯಾಗಿ ಜರುಗಲಿದ್ದು, ನಾನಾ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಉರುಸು ದಿವಸ ಮಹರ್ಷಿ ವಾಲ್ಮೀಕಿ ನಾಟ್ಯ ಸಂಘದಿಂದ ಕಲಿಯುಗದಲ್ಲಿ ಘರ್ಜಿಸಿದ ಕರ್ಣಾರ್ಜುನ ಎಂದು ಸಾಮಾಜಿಕ ನಾಟಕ ನಡೆಯಲಿದೆ ಎಂದು ದರ್ಗಾ ಅಧ್ಯಕ್ಷ ಮೌಲಾಸಾಬ್ ಜಮಾದಾರ, ಕಾರ್ಯದರ್ಶಿ ಭಾಷಾಸಾಬ್ ಚಿಕ್ಕಗಲಗಲಿ ತಿಳಿಸಿದ್ದಾರೆ. ಹಿಂದೂ-ಮುಸ್ಲಿಂ ಸಮುದಾಯಕ್ಕೂ ಪವಿತ್ರ ಕ್ಷೇತ್ರವಾಗಿರುವ ಈ ದರ್ಗಾಕ್ಕೆ ಐತಿಹಾಸಿಕ ಹಿನ್ನೆಲೆಯಿದೆ. ದೇಸಾಯಿ ಮನೆತನದ ಗಲೀಫ್ ಹಾಗೂ ನೈವೇದ್ಯ ಆರ್ಿಸಿದ ಮೇಲೆಯೇ ಉರುಸು ಆರಂಭವಾಗುತ್ತದೆ. ಸುತ್ತಮುತ್ತಲಿನ ಜನತೆ ಜಾತಿ ಭೇದವಿಲ್ಲದೇ ಎಲ್ಲರೂ ಮನೆಗಳನ್ನು ಶೃಂಗರಿಸುವ ಮೂಲಕ ಉರುಸಿನಲ್ಲಿ ಭಕ್ತಿಯಿಂದ ಭಾಗವಹಿಸುತ್ತಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 