ಅಥಣಿ ಬಿಜೆಪಿ ಮಂಡಲ ಅಧ್ಯಕ್ಷರಾಗಿ ಗೀರೀಶ ಬುಟಾಳಿ ಆಯ್ಕೆ
Girish Butali elected as Athani BJP Mandal President
ಅಥಣಿ 26 : .ಬಿಜೆಪಿ ಅಥಣಿ ಮಂಡಲದ ಅಧ್ಯಕ್ಷರನ್ನಾಗಿ ಗೀರೀಶ್ ಬುಟಾಳಿ ಇವರನ್ನು ನೇಮಕ ಮಾಡಿ ಆದೇಶಿಸಲಾಗಿದೆ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಸಂಜಯ ಪಾಟೀಲ ಗೀರೀಶ್ ಬುಟಾಳಿ ಇವರ ಕೈ ಗೆ ಬಿಜೆಪಿಯ ಕಮಲದ ಚಿಹ್ನೆಯ ಧ್ವಜ ಕೊಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.
ಬಿಜೆಪಿ ಧುರೀಣ ಗೀರೀಶ ಬುಟಾಳಿ ಅಥಣಿ ಪುರಸಭೆಯ ಅಧ್ಯಕ್ಷರಾಗಿ ಒಂದು ಅವಧಿಗೆ ಕಾರ್ಯನಿರ್ವಹಿದ್ದರು. ಇವರ ಅಧಿಕಾರವಧಿಯಲ್ಲಿ ಅನೇಕ ಜನಪರ, ಅಭಿವೃದ್ಧಿ ಪರ ಯೋಜನೆಗಳು ಅಥಣಿಯಲ್ಲಿ ಅನುಷ್ಠಾನಗೊಂಡಿದ್ದವು. ಒಂದು ಬಾರಿ ಜೆಡಿಎಸ್ ಪಕ್ಷದಿಂದ ಅಥಣಿ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧೆ ಕೂಡ ಮಾಡಿದ್ದರು. ಬದಲಾದ ರಾಜಕೀಯ ಸ್ಥಿತಿಯಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರೆ್ಡಯಾಗಿದ್ದ ಇವರು ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತಾವು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಇವರ ಸಂಘಟನಾ ಚತುರತೆ ಗಮನಿಸಿದ ಬಿಜೆಪಿ ನಾಯಕರು ಅಥಣಿ ಮಂಡಲಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಗೀರೀಶ ಬುಟಾಳಿ ಇವರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೃತ ಕುಲಕರ್ಣಿ, ಮಾಜಿ ಶಾಸಕ ಮಹೇಶ ಕುಮಠಳ್ಳಿ, ಹಿರಿಯ ಮುಖಂಡರಾದ ಉಮೇಶರಾವ ಬಂಟೋಡಕರ, ಎಸ್.ಎ.ಮುದಕಣ್ಣವರ, ಪ್ರಭಾಕರ ಚವ್ಹಾಣ ಸೇರಿದಂತೆ ಅನೇಕರು ಗೀರೀಶ ಬುಟಾಳಿ ಇವರನ್ನು ಅಭಿನಂದಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಗೀರೀಶ ಬುಟಾಳಿ, ಅಥಣಿ ಮತಕ್ಷೇತ್ರದಲ್ಲಿ ಬಿಜೆಪಿಯನ್ನು ಅಧಿಕಾರ ತರುವ ನಿಟ್ಟಿನಲ್ಲಿ ಇಂದಿನಿಂದಲೇ ಕಾರ್ಯ ಪ್ರವೃತ್ತನಾಗುವೆ ಎಂದ ಅವರು ಮೊದಲಿನಂತೆಯೇ ನನಗೂ ಕೂಡ ಮಂಡಲ ಪದಾಧಿಕಾರಿಗಳು, ಕಾರ್ಯಕರ್ತರು, ಧುರೀಣರು ಮಾರ್ಗದರ್ಶನ ಮತ್ತು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 