ಗಿರೀಶ್ ಕಾರ್ನಾಡ್ ನಿಧನಕ್ಕೆ ಪಂಡಿತಾರಾಧ್ಯ ಶ್ರೀಗಳ ಸಂತಾಪ
ಲೋಕದರ್ಶನವರದಿ
ಸಾಣೇಹಳ್ಳಿ10: ಇಲ್ಲಿನ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳವರು ಬೆಂಗಳೂರಿನಲ್ಲಿ ಇಂದು ಬೆಳಗಿನಜಾವ ನಮ್ಮನ್ನಗಲಿದ ಡಾ. ಗಿರೀಶ್ ಕಾನರ್ಾಡ್ ನಿಧನಕ್ಕೆ ಸಂತಾಪ ಸೂಚಿಸಿ ಮಾತನಾಡಿ ಕಾನರ್ಾಡ್ ಅಪ್ರತಿಮ ನಾಟಕಕಾರ, ಚಿಂತಕ, ಲೇಖಕ, ವಾಗ್ಮಿ, ನಟ, ನಿದರ್ೇಶಕರಾಗಿದ್ದವರು. ಕನ್ನಡಕ್ಕೆ ಆರನೆಯ ಜ್ಞಾನಪೀಠ ಪ್ರಶಸ್ತಿಯನ್ನು ತಂದುಕೊಟ್ಟವರು.
ಕನ್ನಡ ರಂಗಭೂಮಿಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಎತ್ತರಿಸಿದವರು. ಕನ್ನಡನಾಡಿನ ಸಾಂಸ್ಕೃತಿಕ ವಕ್ತಾರರಾಗಿ ಕೆಲಸ ಮಾಡಿದವರು. ಅವರ ಯಯಾತಿ, ತುಘಲಕ್, ಹಯವದನ, ನಾಗಮಂಡಲ, ತಲೆದಂಡ, ಅಗ್ನಿ ಮತ್ತು ಮಳೆ, ಅಂಜುಮಲ್ಲಿಗೆ, ಹಿಟ್ಟಿನ ಹುಂಜ, ಟಿಪ್ಪುವಿನ ಕನಸುಗಳು ಮುಂತಾದ ನಾಟಕಗಳು ಭಾರತೀಯ ಭಾಷೆಗಳಲ್ಲಲ್ಲದೆ ವಿದೇಶಿ ಭಾಷೆಗಳಲ್ಲಿಯೂ ಅನುವಾದಗೊಂಡಿರುವುದು ಮತ್ತು ಪ್ರದರ್ಶನಗಳನ್ನು ಕಂಡಿರುವುದು ಅವುಗಳ ಮಹತ್ವವನ್ನು ಸಾರುತ್ತದೆ. ನಮ್ಮ ಶಿವಸಂಚಾರ ತಂಡ ಅವರ `ತಲೆದಂಡ' ನಾಟಕವನ್ನು ಕನ್ನಡದಲ್ಲಿ, ಭಾರತ ಸಂಚಾರ ತಂಡ ಹಿಂದಿಯಲ್ಲಿ ನೂರಾರು ಪ್ರದರ್ಶನಗಳನ್ನು ನೀಡಿದೆ.
ಇಂತಹ ಅಪ್ರತಿಮ ಚೇತನ ನಮ್ಮನ್ನು ಅಗಲಿರುವುದು ವಿಷಾದದ ಸಂಗತಿ. ಅವರ ಅಗಲುವಿಕೆಯ ನೋವನ್ನು ತುಂಬುವ ಶಕ್ತಿ ಕನ್ನಡಿಗರಿಗೆ ಬರಲಿ. ಮತ್ತೆ ಅಂತಹ ಚೇತನಗಳು ಕನ್ನಡ ನೆಲದಲ್ಲಿ ಮೈದಾಳುವಂತಹ ವಾತಾವರಣ ನಿಮರ್ಿಸುವುದೇ ನಾವು ಅವರಿಗೆ ಸಲ್ಲಿಸುವ ನಿಜ ಶ್ರದ್ಧಾಂಜಲಿ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 