ಹರಿಯಾಣದಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕಿ ಸಾವು ?
ಚಂಡೀಗಢ, ನ 4: ತಮಿಳುನಾಡಿನಲ್ಲಿ ಎರಡು ವರ್ಷದ ಬಾಲಕ ಸುಜಿತ್ ವಿಲ್ಸನ್ ಸಾವಿನ ಕಹಿ ಘಟನೆ ಮಾಸುವ ಮುನ್ನವೇ ಹರಿಯಾಣದ ಕರ್ನಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಷರ್ಿಂಗಾಪುರ್ ಗ್ರಾಮದಲ್ಲಿ ಐದು ವರ್ಷದ ಬಾಲಕಿಯೊಬ್ಬಳು ಕೊಳವೆ ಬಾವಿಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಕೊಳವೆ ಬಾವಿಗೆ ಬಿದ್ದ ಮಗುವನ್ನು ಶಿವಾನಿ ಎಂದು ಗುರುತಿಸಲಾಗಿದ್ದು ಆಕೆಯ ರಕ್ಷಣೆಗೆ ಎನ್ ಡಿ ಆರ್ ಎಫ್ ತಂಡ ಹರಸಾಹಸ ಮಾಡಿದರೂ ಪ್ರಯೋಜನವಾಗದೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಬಾಲಕಿಯನ್ನು ಬದುಕಿಸಲು ರಕ್ಷಣಾ ಸಿಬ್ಬಂದಿ ಬೋರ್ ವೆಲ್ ಒಳಕ್ಕೆ ಆಮ್ಲಜನಕ ಪೂರೈಸಿದರೂ ಪ್ರಯೋಜನವಾಗಲಿಲ್ಲ. ಜೊತೆಗೆ ಪಾಲಕರ ಧ್ವನಿಯನ್ನು ರೆಕಾರ್ಡ್ ಮಾಡಿ ಆ ಧ್ವನಿಮುದ್ರಿಕೆ ಆಕೆಗೆ ಕೇಳಿಸುವಂತೆ ಮಾಡಿ ಧೈರ್ಯ ತುಂಬುವ ಪ್ರಯತ್ನ ಮಾಡಲಾಗಿತ್ತು. ಭಾನುವಾರ ಮನೆಯ ಹೊರಗೆ ಆಟವಾಡುತ್ತಿದ್ದಾಗ ಅವರೇ ಕೊರೆಸಿದ್ದ ಕೊಳವೆ ಬಾವಿಗೆ ಶಿವಾನಿ ಆಕಸ್ಮಿಕವಾಗಿ ಬಿದ್ದಿದ್ದು ಬಹಳ ಹೊತ್ತಾದರೂ ಆಕೆ ಕಾಣದಿದ್ದಾಗ ಪಾಲಕರು ಆತಂಕಗೊಂಡು ಹುಡುಕಾಟ ನಡೆಸಿದ್ದರು. ಅನಂತರ ಆಕೆ ಕೊಳವೆಬಾವಿಗೆ ಬಿದ್ದಿರುವುದು ಖಚಿತವಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮತ್ತು ಎನ್ ಡಿ ಆರ್ ಎಫ್ ತಂಡ 50 ಅಡಿ ಕೊಳವೆ ಬಾವಿಗೆ ಬಿದ್ದಿದ್ದ ಶಿವಾನಿಯನ್ನು ಬದುಕಿಸಲು ಹರಸಾಹಸ ಮಾಡಿದರೂ ಪ್ರಯೋಜನವಾಗದೇ ಆಕೆ ಮೃತಪಟ್ಟಿರುವುದಾಗಿ ಇತ್ತೀಚಿನ ವರದಿ ತಿಳಿಸಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 