ಅಪ್ಪಾಜಿ ನಾಡಗೌಡರಿಗೆ ಸಚಿವ ಸ್ಥಾನ ನೀಡಿ:ಅಧ್ಯಕ್ಷ ಆಸಿಫ್
Give Appaji Nadagowda a ministerial berth: President Asif
ಅಪ್ಪಾಜಿ ನಾಡಗೌಡರಿಗೆ ಸಚಿವ ಸ್ಥಾನ ನೀಡಿ:ಅಧ್ಯಕ್ಷ ಆಸಿಫ್
ತಾಳಿಕೋಟಿ 09: ಜಿಲ್ಲೆ ಹಿರಿಯ ಮುತ್ಸದ್ದಿ ರಾಜಕಾರಣಿ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರು 6 ಬಾರಿ ಶಾಸಕರಾಗಿ ಅಪಾರ ಅನುಭವ ಹೊಂದಿದವರಾಗಿದ್ದಾರೆ ಈ ಬಾರಿಯ ಸಂಪುಟ ಪುನರ್ ರಚನೆಯಲ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಯುವ ಘಟಕದ ತಾಲೂಕಾಧ್ಯಕ್ಷ ಆಸೀಫ ಕೆಂಭಾವಿ ವರಿಷ್ಠರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಈ ಕುರಿತು ಭಾನುವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು ಕೆ ಎಸ್ ಡಿ ಎಲ್ ನಿಗಮದ ಅಧ್ಯಕ್ಷರಾಗಿ ಅಪ್ಪಾಜಿ ನಾಡಗೌಡರು ನಷ್ಟದಲ್ಲಿದ್ದ ನಿಗಮವನ್ನು ಲಾಭದತ್ತ ಕೊಂಡೊಯ್ಯದಿದ್ದಾರೆ. ಅವರ ಅಪಾರ ಅನುಭವ ಹಾಗೂ ಪ್ರಬುದ್ಧತೆಯನ್ನು ಬಳಸಿಕೊಳ್ಳಲು ಈ ಬಾರಿ ಸಚಿವ ಸಂಪುಟದಲ್ಲಿ ಅವರಿಗೆ ಅವಕಾಶವನ್ನು ಕಲ್ಪಿಸಬೇಕು. ಈ ಮೊದಲು ಸಚಿವ ಸ್ಥಾನ ನೀಡುವುದಾಗಿ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭರವಸೆ ನೀಡಿದ್ದರು, ಆದರೆ ಕೊನೆ ಗಳಿಗೆಯಲ್ಲಿ ಅವರನ್ನು ಕೈ ಬಿಡಲಾಯಿತು ಪದೇ ಪದೇ ಅವರಿಗೆ ಅನ್ಯಾಯವಾಗುತ್ತಿದೆ ಆದರೆ ಈ ಬಾರಿ ಹೀಗಾಗದಂತೆ ನೋಡಿಕೊಂಡು ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ತಿಳಿಸಿದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 