‘ಮಕ್ಕಳಿಗೆ ಹಣ್ಣು-ತರಕಾರಿ ತಿನ್ನಲು ಕೊಡಿ’
Give children fruits and vegetables to eat
ತಿಮ್ಮಾಪೂರ ಜ್ಞಾನಜ್ಯೋತಿ ವಿದ್ಯಾಲಯದ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಆಹಾರ ಮೇಳ
ಉಪ್ಪಿನಬೆಟಗೇರಿ 10: ಬೇಕರಿ ಉತ್ಪನ್ನಗಳ ವಿಭಿನ್ನ ತಿಂಡಿ-ತಿನಿಸುಗಳ ಬದಲಾಗಿ ಮಕ್ಕಳಿಗೆ ಹೆಚ್ಚೆಚ್ಚು ಹಣ್ಣು-ತರಕಾರಿ ತಿನ್ನಲು ಕೊಡಬೇಕೆಂದು ಧಾರವಾಡ ಕೃಷಿ ವಿ.ವಿ. ಪ್ರಾಧ್ಯಾಪಕ ಡಾ. ಸದಾನಂದ ಹಿರೇಮಠ ವಿದ್ಯಾರ್ಥಿಗಳ ಪಾಲಕರು ಮತ್ತು ಪೋಷಕರಲ್ಲಿ ಮನವಿ ಮಾಡಿದರು.
ಅವರು ಹತ್ತಿರದ ಧಾರವಾಡ ತಾಲೂಕು ತಿಮ್ಮಾಪೂರ ಜ್ಞಾನಜ್ಯೋತಿ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಆಹಾರ ಮೇಳ ಉದ್ಘಾಟಿಸಿ ಮಾತನಾಡುತ್ತಿದ್ದರು. ದೇಸಿ ಕೃಷಿ ಪದ್ಧತಿ ಅನುಸರಿಸಿ ಬೆಳೆದ ಧಾನ್ಯಗಳ ಸೇವನೆಯಿಂದ ವಿದ್ಯಾರ್ಥಿಗಳ ಆರೋಗ್ಯ ಸಂವರ್ಧಿಸುತ್ತದೆ. ತನ್ಮೂಲಕ ವಿದ್ಯಾರ್ಜನೆಗೆ ಅಗತ್ಯವಾದ ಸ್ಮರಣಶಕ್ತಿಯೂ ವಿಕಾಸವಾಗುತ್ತದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಕೃಷಿ ವಿ.ವಿ. ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನದ ತಜ್ಞೆ ಡಾ.ಪಲ್ಲವಿ ಟಿ. ಮಾತನಾಡಿ, ಪಠ್ಯಾಧಾರಿತ ಕಲಿಕಾ ಚಟುವಟಿಕೆಗಳನ್ನು ಹಮ್ಮಿಕೊಂಡಾಗ ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ನೆಲೆಯಲ್ಲಿ ವಿಷಯ ಜ್ಞಾನ ಹೆಚ್ಚುತ್ತದೆ ಎಂದರು.
ಅತಿಥಿಗಳಾಗಿದ್ದ ಅಮ್ಮಿನಬಾವಿ ಯುಕೋ ಬ್ಯಾಂಕ್ ಪ್ರಬಂಧಕ ಶಂಕರ ಕಡ್ಲಿಮಟ್ಟಿ ಮತ್ತು ಸಿಆರ್ಪಿ ಬಸವರಾಜ ಕುರಗುಂದ ಮಾತನಾಡಿದರು. ವಿದ್ಯಾಚೇತನ ಶಿಕ್ಷಣ ಸಮಿತಿ ನಿರ್ದೇಶಕ ಮೃತ್ಯುಂಜಯ ಹಿರೇಮಠ ಅಧ್ಯಕ್ಷತೆವಹಿಸಿದ್ದರು. ಶಾಲೆಯ ಮುಖ್ಯಾಧ್ಯಾಪಕಿ ಬಿಂದು ಲಗಳಿ ವಂದಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 