‘ಮಕ್ಕಳಿಗೆ ಹಣ್ಣು-ತರಕಾರಿ ತಿನ್ನಲು ಕೊಡಿ’
Give children fruits and vegetables to eat
ತಿಮ್ಮಾಪೂರ ಜ್ಞಾನಜ್ಯೋತಿ ವಿದ್ಯಾಲಯದ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಆಹಾರ ಮೇಳ
ಉಪ್ಪಿನಬೆಟಗೇರಿ 10: ಬೇಕರಿ ಉತ್ಪನ್ನಗಳ ವಿಭಿನ್ನ ತಿಂಡಿ-ತಿನಿಸುಗಳ ಬದಲಾಗಿ ಮಕ್ಕಳಿಗೆ ಹೆಚ್ಚೆಚ್ಚು ಹಣ್ಣು-ತರಕಾರಿ ತಿನ್ನಲು ಕೊಡಬೇಕೆಂದು ಧಾರವಾಡ ಕೃಷಿ ವಿ.ವಿ. ಪ್ರಾಧ್ಯಾಪಕ ಡಾ. ಸದಾನಂದ ಹಿರೇಮಠ ವಿದ್ಯಾರ್ಥಿಗಳ ಪಾಲಕರು ಮತ್ತು ಪೋಷಕರಲ್ಲಿ ಮನವಿ ಮಾಡಿದರು.
ಅವರು ಹತ್ತಿರದ ಧಾರವಾಡ ತಾಲೂಕು ತಿಮ್ಮಾಪೂರ ಜ್ಞಾನಜ್ಯೋತಿ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಆಹಾರ ಮೇಳ ಉದ್ಘಾಟಿಸಿ ಮಾತನಾಡುತ್ತಿದ್ದರು. ದೇಸಿ ಕೃಷಿ ಪದ್ಧತಿ ಅನುಸರಿಸಿ ಬೆಳೆದ ಧಾನ್ಯಗಳ ಸೇವನೆಯಿಂದ ವಿದ್ಯಾರ್ಥಿಗಳ ಆರೋಗ್ಯ ಸಂವರ್ಧಿಸುತ್ತದೆ. ತನ್ಮೂಲಕ ವಿದ್ಯಾರ್ಜನೆಗೆ ಅಗತ್ಯವಾದ ಸ್ಮರಣಶಕ್ತಿಯೂ ವಿಕಾಸವಾಗುತ್ತದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಕೃಷಿ ವಿ.ವಿ. ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನದ ತಜ್ಞೆ ಡಾ.ಪಲ್ಲವಿ ಟಿ. ಮಾತನಾಡಿ, ಪಠ್ಯಾಧಾರಿತ ಕಲಿಕಾ ಚಟುವಟಿಕೆಗಳನ್ನು ಹಮ್ಮಿಕೊಂಡಾಗ ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ನೆಲೆಯಲ್ಲಿ ವಿಷಯ ಜ್ಞಾನ ಹೆಚ್ಚುತ್ತದೆ ಎಂದರು.
ಅತಿಥಿಗಳಾಗಿದ್ದ ಅಮ್ಮಿನಬಾವಿ ಯುಕೋ ಬ್ಯಾಂಕ್ ಪ್ರಬಂಧಕ ಶಂಕರ ಕಡ್ಲಿಮಟ್ಟಿ ಮತ್ತು ಸಿಆರ್ಪಿ ಬಸವರಾಜ ಕುರಗುಂದ ಮಾತನಾಡಿದರು. ವಿದ್ಯಾಚೇತನ ಶಿಕ್ಷಣ ಸಮಿತಿ ನಿರ್ದೇಶಕ ಮೃತ್ಯುಂಜಯ ಹಿರೇಮಠ ಅಧ್ಯಕ್ಷತೆವಹಿಸಿದ್ದರು. ಶಾಲೆಯ ಮುಖ್ಯಾಧ್ಯಾಪಕಿ ಬಿಂದು ಲಗಳಿ ವಂದಿಸಿದರು.
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ 