15 ದಿನಗಳಲ್ಲಿ ಸಂಪೂರ್ಣ ವರದಿ ನೀಡಿ: ಮೂರ್ತಿ
ಕೊಪ್ಪಳ 01: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಅನುಷ್ಠಾನಗೊಂಡಿರುವ ಚೆಕ್ ಡ್ಯಾಂಗಳ ಕುರಿತು ಜಿಲ್ಲಾ ಗುಣ ನಿಯಂತ್ರಣ ತಂಡದವರಿಂದ ಕೈಗೊಂಡ ತನಿಖೆ ಕಾರ್ಯವನ್ನು ಪೂರ್ಣಗೊಳಿಸಿ ಇನ್ನು 15 ದಿನಗಳಲ್ಲಿ ಸಂಪೂರ್ಣ ವರದಿ ನೀಡಬೇಕು ಎಂದು ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ಹೇಳಿದರು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಗುಣ ನಿಯಂತ್ರಣ ತಂಡವದರೊಂದಿಗೆ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 635 ಚೆಕ್ ಡ್ಯಾಂಗಳಲ್ಲಿ 338 ಚೆಕ್ ಡ್ಯಾಂಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಗುಣ ನಿಯಂತ್ರಣ ತಂಡದವರಿಂದ ತನಿಖೆ ಕಾರ್ಯ ಮುಗಿದಿದೆ. ಇನ್ನೂ 297 ಚೆಕ್ ಡ್ಯಾಂಗಳ ತನಿಖೆ ಬಾಕಿ ಇದ್ದು, 15 ದಿನದೊಳಗೆ ಎಲ್ಲ ಚೆಕ್ ಡ್ಯಾಂಗಳ ತನಿಖೆಯನ್ನು ಪೂರ್ಣಗೊಳಿಸಿ ಸಂಪೂರ್ಣ ವರದಿಯನ್ನು ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತನ ಉಪ ಕಾರ್ಯದರ್ಶಿ ಎನ್.ಕೆ. ತೊರವಿ ಸೇರಿದಂತೆ ಜಿಲ್ಲಾ ಗುಣ ನಿಯಂತ್ರಣ ತಂಡದ ಅಧಿಕಾರಿಗಳು ಉಪಸ್ಥಿತರಿದ್ದರು.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 