ಎಚ್. ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡುವುದರಿಂದ ಕಾರ್ಯಕರ್ತರಲ್ಲಿ ಉತ್ಸಾಹ ಮತ್ತು ವಿಶ್ವಾಸ ಮೂಡಲಿದೆ
Giving H. K. Patil a ministerial berth will instill enthusiasm and confidence among the workers
ಶಿರಹಟ್ಟಿ 18 : ಉತ್ತರ ಕರ್ನಾಟಕ ಭಾಗದ ಹಿರಿಯ ಕಾಂಗ್ರೆಸ್ ನಾಯಕರು, ಶಾಸಕರು ಹಾಗೂ ಜನಸ್ಪಂಧನೆಯ ನಾಯಕರಾದ ಎಚ್ . ಕೆ . ಪಾಟೀಲ್ ಅವರಿಗೆ ಸನ್ಮಾನ ಡಿ ಕೆ ಶಿವಕುಮಾರ ರವರ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ನಾಗರಾಜ ಪೋತರಾಜ್ ಹೇಳಿದರು.ಎಚ್. ಕೆ. ಪಾಟೀಲರು ಅವರು ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಸೇವೆ ಸಲ್ಲಿಸಿದ್ದು, ಪಕ್ಷದ ಸಂಕಷ್ಟದ ಸಂದರ್ಭಗಳಲ್ಲಿಯೂ ನಿಷ್ಠೆಯಿಂದ ಪಕ್ಷದ ಪರವಾಗಿ ನಿಂತು ಸಂಘಟನೆಯನ್ನು ಬಲಪಡಿಸಿದ್ದಾರೆ ಎಂದರು. ಅಲ್ಲದೆ ಅವರ ರಾಜಕೀಯ ಅನುಭವ, ಆಡಳಿತಾತ್ಮಕ ಜ್ಞಾನ, ಪ್ರಾಮಾಣಿಕತೆ ಹಾಗೂ ಜನಸೇವೆಯ ಬದ್ಧತೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕೆಂದರು. ನಂತರ ಎಚ್. ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡುವುದರಿಂದ ಉತ್ತರ ಕರ್ನಾಟಕದ ಜನರ ಆಶಯಗಳಿಗೆ ಗೌರವ ದೊರೆಯುವುದರ ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ನವ ಚೈತನ್ಯ ಉತ್ಸಾಹ ಮತ್ತು ವಿಶ್ವಾಸ ಮೂಡಲಿದೆ ಎಂದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 