ಚಿರತೆ ದಾಳಿಯಿಂದ ಆಡುಗಳ ಬಲಿ: ಜನರಲ್ಲಿ ಆತಂಕ
ಲೋಕದರ್ಶನ ವರದಿ
ಕಂಪ್ಲಿ 18:ತಾಲೂಕಿನ ಸಮೀಪದ ರಾಮಸಾಗರ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡು ಆಡುಗಳು ಗುರುವಾರ ಬಲಿಯಾಗಿದ್ದು, ಜನತೆಯ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
ಗ್ರಾಮದ ಹೊರವಲಯದಲ್ಲಿ ಕಾಗೆ ಪಂಪಾಪತಿ ಸೇರಿದ ಎರಡು ಆಡುಗಳನ್ನು ಮೇಯಿಸಲು ಹೋದಾಗ, ಚಿರತೆ ದಾಳಿ ನಡೆಸಿ ತಿಂದು ಹಾಕಿರುವ ಘಟನೆ ನಡೆದಿದೆ. ಇತ್ತೀಚೆಗೆ ಸೋಮಲಾಪುರ, ದೇವಲಾಪುರ, ಮೆಟ್ರಿ, ಹಳೇ ದರೋಜಿಯಲ್ಲಿ ಚಿರತೆ ದಾಳಿಗೆ ಜನರಲ್ಲಿ ಆತಂಕ ಮನೆ ಮಾಡಿತ್ತು. ಆದರೆ, ಈಗ ರಾಮಸಾಗರ ಗ್ರಾಮದಲ್ಲಿ ಆಡುಗಳನ್ನು ಕೊಂದಿದ್ದರಿಂದ ಜನರಲ್ಲಿ ಆತಂಕ ಚಿರತೆಯ ಭಯ ಸೃಷ್ಠಿಯಾಗಿದೆ. ಜೀವನಕ್ಕೆ ಆಧಾರವಾಗಿದ್ದ ಆಡುಗಳೇ ಚಿರತೆ ಬಾಯಿಗೆ ಬಲಿಯಾಗಿದ್ದರಿಂದ ನಷ್ಟ ಅನುಭವಿಸುವಂತಾಗಿದೆ ಎಂಬುದು ಸಂಸ್ರತ್ತನ ಅಳಲಾಗಿದೆ. ಇದರ ನಷ್ಟ ಪರಿಹಾರ ನೀಡಬೇಕೆಂದು ಸಂತ್ರಸ್ತ ಕಾಗೆ ಪಂಪಾಪತಿ ಅವರು ಹೊಸಪೇಟೆ ವಲಯ ಅರಣ್ಯಾಧಿಕಾರಿ ಕಚೇರಿಗೆ ಶುಕ್ರವಾರ ಮನವಿಯೊಂದಿಗೆ ದೂರು ನೀಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 