ಚಿರತೆ ದಾಳಿಯಿಂದ ಆಡುಗಳ ಬಲಿ: ಜನರಲ್ಲಿ ಆತಂಕ
ಲೋಕದರ್ಶನ ವರದಿ
ಕಂಪ್ಲಿ 18:ತಾಲೂಕಿನ ಸಮೀಪದ ರಾಮಸಾಗರ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡು ಆಡುಗಳು ಗುರುವಾರ ಬಲಿಯಾಗಿದ್ದು, ಜನತೆಯ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
ಗ್ರಾಮದ ಹೊರವಲಯದಲ್ಲಿ ಕಾಗೆ ಪಂಪಾಪತಿ ಸೇರಿದ ಎರಡು ಆಡುಗಳನ್ನು ಮೇಯಿಸಲು ಹೋದಾಗ, ಚಿರತೆ ದಾಳಿ ನಡೆಸಿ ತಿಂದು ಹಾಕಿರುವ ಘಟನೆ ನಡೆದಿದೆ. ಇತ್ತೀಚೆಗೆ ಸೋಮಲಾಪುರ, ದೇವಲಾಪುರ, ಮೆಟ್ರಿ, ಹಳೇ ದರೋಜಿಯಲ್ಲಿ ಚಿರತೆ ದಾಳಿಗೆ ಜನರಲ್ಲಿ ಆತಂಕ ಮನೆ ಮಾಡಿತ್ತು. ಆದರೆ, ಈಗ ರಾಮಸಾಗರ ಗ್ರಾಮದಲ್ಲಿ ಆಡುಗಳನ್ನು ಕೊಂದಿದ್ದರಿಂದ ಜನರಲ್ಲಿ ಆತಂಕ ಚಿರತೆಯ ಭಯ ಸೃಷ್ಠಿಯಾಗಿದೆ. ಜೀವನಕ್ಕೆ ಆಧಾರವಾಗಿದ್ದ ಆಡುಗಳೇ ಚಿರತೆ ಬಾಯಿಗೆ ಬಲಿಯಾಗಿದ್ದರಿಂದ ನಷ್ಟ ಅನುಭವಿಸುವಂತಾಗಿದೆ ಎಂಬುದು ಸಂಸ್ರತ್ತನ ಅಳಲಾಗಿದೆ. ಇದರ ನಷ್ಟ ಪರಿಹಾರ ನೀಡಬೇಕೆಂದು ಸಂತ್ರಸ್ತ ಕಾಗೆ ಪಂಪಾಪತಿ ಅವರು ಹೊಸಪೇಟೆ ವಲಯ ಅರಣ್ಯಾಧಿಕಾರಿ ಕಚೇರಿಗೆ ಶುಕ್ರವಾರ ಮನವಿಯೊಂದಿಗೆ ದೂರು ನೀಡಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 