ಕ್ರೀಡಾ ಶಾಲೆಯ ಕ್ರೀಡಾಪಟುಗಳಿಗೆ ಚಿನ್ನದ ಪದಕ
ಬಾಗಲಕೋಟೆ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಇತ್ತೀಚೆಗೆ ಜರುಗಿದ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಡ ವಿಭಾಗದ ಶಾಲಾ ಕುಸ್ತಿ ಪಂದ್ಯಾವಳಿಗಳಲ್ಲಿ ಬಾಗಲಕೋಟೆ ಕ್ರೀಡಾ ಶಾಲೆಯ ಕ್ರೀಡಾಪಟುಗಳು 4 ಚಿನ್ನ, 2 ಬೆಳ್ಳಿ ಹಾಗು 5 ಕಂಚಿನ ಪದಕಗಳನ್ನು ಪಡೆದುಕೊಂಡಿದ್ದಾರೆ.
ನವದೆಹಲಿಯಲ್ಲಿ ಇತ್ತೀಚೆಗೆ ಜರುಗಿದ ರಾಷ್ಟ್ರ ಮಟ್ಟದ ಪ್ರಾಥಮಿಕ ಮತ್ತು ಪ್ರೌಡ ವಿಭಾಗದ ಶಾಲಾ ಕುಸ್ತಿ ಪಂದ್ಯಾವಳಿಗಳಲ್ಲಿಯೂ ಸಹ ಬಾಗಲಕೋಟೆಯ ಕ್ರೀಡಾ ಶಾಲೆಯ ಕಲ್ಪಣಾ ಕೆಂಪನ್ನವರ ಒಂದು ಕಂಚಿನ ಪದಕ ಪಡೆದುಕೊಂಡಿದ್ದಾರೆ.
ವಿಜಪುರದಲ್ಲಿ ಜರುಗಿದ ರಾಜ್ಯ ಮಟ್ಟದ ಟ್ರ್ಯಾಕ್ ಸೈಕ್ಲಿಂಗ್ ಚಾಂಪಿಯನ್ಶಿಪ್ನಲ್ಲಿ ಸಹ 2 ಚಿನ್ನ, 2 ಬೆಳ್ಳಿ, ಮತ್ತು 1 ಕಂಚಿನ ಪದಕಗಳನ್ನು ಕ್ರೀಡಾ ಶಾಲೆಯ ಕ್ರೀಡಾಪಟುಗಳು ಪಡೆದುಕೊಂಡಿದ್ದಾರೆ.
ಪದಕ ವಿಜೇತರಾದ ಎಲ್ಲ ಕುಸ್ತಿ ಮತ್ತು ಸೈಕ್ಲಿಂಗ್ ಕ್ರೀಡಾಪಟುಗಳಿಗೂ ಹಾಗೂ ಕುಸ್ತಿ ತರಬೇತುದಾರರಾದ ಕಾಡೇಶ ನ್ಯಾಮಗೌಡ ಹಾಗೂ ಸೈಕ್ಲಿಂಗ್ ತರಬೇತುದಾರರಾದ ಅನಿತಾ ನಿಂಬರಗಿ ಹಾಗೂ ಸಂಗಪ್ಪ ನ್ಯಾಮಗೌಡ ಅವರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿದರ್ೇಶಕ ಎಂ.ಎನ್.ಮೇಲಿನಮನಿ ಅಭಿನಂದಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 