ಗೋಲಿಬಾರ್ ಘಟನೆ, ಸಂತ್ರಸ್ಥ ಕುಟುಂಬಕ್ಕೆ ಟಿಎಂಸಿಯಿಂದ ಪರಿಹಾರ ವಿತರಣೆ
ಮಂಗಳೂರು, ಡಿ 28 ,ಪೌರತ್ವ
ತಿದ್ದುಪಡಿ ಕಾಯಿದೆ ವಿರೋಧಿ ಪ್ರತಿಭಟನೆ, ಹೋರಾಟ
ಸಮಯದಲ್ಲಿ ಪೊಲೀಸರ ಗೋಲಿಬಾರ್ ಘಟನೆಯಲ್ಲಿ
ಮೃತಪಟ್ಟ ಸಂತ್ರಸ್ಥ ಕುಟುಂಬಕ್ಕೆ ತೃಣಮೂಲ ಕಾಂಗ್ರೆಸ್
ಇಂದು ಪರಿಹಾರದ ಚೆಕ್ ವಿತರಣೆ ಮಾಡಿದೆ. ರಾಜ್ಯ ಸರ್ಕಾರ ಮೃತರ ಕುಟುಂಬಕ್ಕೆ ಒಂದೇ ಒಂದು ರೂಪಾಯಿ ಪರಿಹಾರ
ಕೊಡುವುದಿಲ್ಲ ಎಂದು ಹೇಳಿದ ನಂತರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರಿಹಾರ
ಘೋಷಿಸಿದ್ದು, ಇಂದು ನೊಂದ ಕುಟುಂಬಕ್ಕೆ ಪಕ್ಷದ ವತಿಯಿಂದ ಚೆಕ್ ವಿತರಿಸಲಾಯಿತು. ಮಂಗಳೂರಿನಲ್ಲಿ
ನಡೆದ ನಡೆದ ಪ್ರತಿಭಟನೆ ಹಿಂಸಾಸ್ವರೂಪ ಪಡೆದಿತ್ತು. ಈ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು
ನಡೆಸಿದ ಗೋಲಿಬಾರ್ ನಲ್ಲಿ ನೌಶಿನ್, ಜಲೀಲ್ ಎಂಬ
ಇಬ್ಬರು ಮೃತಪಟ್ಟಿದ್ದರು. ಈ ಘಟನೆ ಪರಿಶೀಲನೆ ನಡೆಸಿದ
ಸಿಎಂ ಯಡಿಯೂರಪ್ಪ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಿಸಿದ್ದರು. ಇದಾದ ಬಳಿಕ ತಮ್ಮ ಹೇಳಿಕೆ
ಹಿಂಪಡೆದ ಸಿಎಂ, ಮೃತರು ಗಲಭೆಯಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ. ಈ ಹಿನ್ನೆಲೆ ತನಿಖೆ ಬಳಿಕ ಪರಿಹಾರ
ನೀಡಲಾಗುವುದು ಎಂದಿದ್ದರು. ಅದಾದ ನಂತರ ಮತ್ತೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಯಡಿಯೂರಪ್ಪ, ಒಂದೇ
ಒಂದು ರೂಪಾಯಿ ಪರಿಹಾರ ನೀಡುವುದಿಲ್ಲ ಎಂದು ಪದೇ ಪದೇ ಹೇಳಿಕೆ ಬದಲಾಯಿಸಿದ್ದರು. ಈ ಹೇಳಿಕೆಯ ಪರ ಮತ್ತು ವಿರೋಧದ ಚರ್ಚೆ
ನಡೆದು ರಾಜಕೀಯ ಹೋರಾಟಕ್ಕೂ ವೇದಿಕೆ
ಒದಗಿಸಿದೆ. ಬಿಎಸ್ವೈರ ಈ ಕ್ರಮಕ್ಕೆ ಎಲ್ಲೆಡೆ
ವ್ಯಾಪಕ ಟೀಕೆಗಳು ವ್ಯಕ್ತವಾಗಿತ್ತು. ಇದಾದ ಬಳಿಕ, ಮಮತಾ ಬ್ಯಾನರ್ಜಿ ಮಂಗಳೂರು ಗೋಲಿಬಾರ್ ಘಟನೆಗೆ
ಸ್ಪಂದಿಸಿದ್ದರು. ಅಲ್ಲದೇ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದರು.ಅದರಂತೆ
ಇಂದು ಮಂಗಳೂರಿಗೆ ಆಗಮಿಸಿದ ಟಿಎಂಸಿ ಹಿರಿಯ ನಾಯಕ ದಿನೇಶ್ ತ್ರಿವೇದಿ, ಮೃತ ಕುಟುಂಬಗಳಿಗೆ ತಲಾ 5
ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಿಸಿದರು.ಒಂದೆಡೆ ಪರಿಹಾರ ನೀಡುವುದಿಲ್ಲ ಎಂಬ ಯಡಿಯೂರಪ್ಪ ಹೇಳಿಕೆ ಚರ್ಚೆಗೆ ಗ್ರಾಸವಾಗಿದ್ದರೆ,ಮತ್ತೊಂದೆಡೆ ಗಲಭೆಯಲ್ಲಿ ಭಾಗಿಯಾದವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು
ಎಂದು ಬಿಜೆಪಿಯ ಹಲವು ನಾಯಕರು ಹೇಳಿಕೆ ನೀಡುತ್ತಿದ್ಧಾರೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್
ನೇತೃತ್ವದ ಬಿಜೆಪಿ ಸರ್ಕಾರ, ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಮಾಡಿದವರ ಆಸ್ತಿಯನ್ನು ಮುಟ್ಟುಹೋಲು
ಹಾಕುವ ಹೊಸ ಯೋಜನೆಗೆ ಕೈಹಾಕಿದೆ ಇದನ್ನೇ ಉಲ್ಲೇಖಿಸಿ, ಕಂದಾಯ ಸಚಿವ ಆರ್ ಅಶೋಕ್ ಗಲಭೆಯಲ್ಲಿ ಪಾಲ್ಗೊಂಡು
ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವವರ ಖಾಸಗಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಚಿಂತನೆ
ಮಾಡಲಾಗುತ್ತಿದೆ ಎಂದು ಹೇಳಿದ್ದರು. ಇದಕ್ಕೆ ಹಲವು
ಸಚಿವರೂ ಬೆಂಬಲ ವ್ಯಕ್ತಪಡಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 