ಪೊಲೀಸ್ ಇಲಾಖೆಯ ಹಳೇ ಸಂಪ್ರದಾಯಕ್ಕೆ ಪ್ರವೀಣ್ ಸೂದ್ ಗುಡ್ ಬೈ; ಸರಳತೆ ಮೊರೆ ಹೋದ ಡಿಜಿ
ಬೆಂಗಳೂರು, ಜೂ.5, ಪೊಲೀಸ್ ಇಲಾಖೆಯ ಹಳೆಯ ಸಂಪ್ರದಾಯವೊಂದಕ್ಕೆ ರಾಜ್ಯ ಪೊಲೀಸ್ ಮಹಾ ನಿರ್ದೇಶ ಪ್ರವೀಣ್ ಸೂದ್ ಅವರು ತೀಲಾಂಜಲಿ ಹಾಡಿದ್ದಾರೆ.ಇನ್ನು, ಮುಂದಿನ ದಿನಗಳಲ್ಲಿ ಐಜಿಪಿ ಅವರು ತಮ್ಮ ಕಚೇರಿಯಿಂದ ಹೊರಗಡೆ ಬಂದಾಗ ಹಾಗೂ ರಾಜ್ಯ ಪ್ರವಾಸ ಕೈಗೊಂಡಾಗ ಸ್ಥಳೀಯ ಪೊಲೀಸರು ರಸ್ತೆ ಬದಿ ಅಲ್ಲಲ್ಲಿ ಶಿಸ್ತಾಗಿ ನಿಂತು ಅವರಿಗೆ ಸೆಲ್ಯೂಟ್ ಹೊಡೆಯುತ್ತಿದ್ದರು. ಆದರೀಗ ಈ ಪದ್ದತಿಗೆ ಗುಡ್ ಬೈ ಹೇಳಲಾಗಿದೆ.ಡಿಜಿ ಮತ್ತು ಐಜಿಪಿ ಯಾವುದೇ ವೇಳೆ ರಾಜ್ಯ ಪ್ರವಾಸ ಕೈಗೊಂಡಾಗ ಜಿಲ್ಲಾ ಸರಹದ್ದು ದಾಟುವವರೆಗೂ ಪೊಲೀಸರನ್ನು ಕಳುಹಿಸಲಾಗುತ್ತಿತ್ತು. ಅಲ್ಲದೇ, ಈ ಸಂದರ್ಭದಲ್ಲಿ ಆಯಾ ಜಿಲ್ಲೆಗಳ ಡಿಎಸ್ಪಿ, ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ಗಳು ರಸ್ತೆ ಬದಿ ನಿಲ್ಲುತ್ತಿದ್ದರು. ಆದರೀಗ ಯಾವ ಅಧಿಕಾರಿಯೂ ರಸ್ತೆಯಲ್ಲಿ ನಿಂತು ಕಾಯುವ ಅವಶ್ಯಕತೆ ಇಲ್ಲ. ತಮ್ಮ ಪಾಡಿಗೆ ತಾವು ಕೆಲಸ ಮಾಡಿ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಿಬ್ಬಂದಿಗೆ ಸೂಚಿಸಿದ್ದಾರೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 