ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕಾರ ಮುಖ್ಯ : ಲಯನ್ಸ್ ಸಿದ್ದು ನಕಾತಿ
Good morals are important among students: Lions Siddu Nakathi
ಮಹಾಲಿಂಗಪುರ 27: ಪಾಲಕರು ಇಂದಿನ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದರೆ ಸಮಾಜದಲ್ಲಿ ಅವರು ಒಳ್ಳೆಯ ನಾಗರಿಕರಾಗುತ್ತಾರೆ. ವಿದ್ಯಾರ್ಥಿಗಳು ಗುರು-ಹಿರಿಯರಿಗೆ ಗೌರವ ನೀಡಿ ಒಳ್ಳೆಯ ಸಂಸ್ಕೃತಿಯನ್ನು ಬೆಳೆಸಿಕೊಳ್ಳಿ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಸಿದ್ದು ನಕಾತಿ ಹೇಳಿದರು.
ಸ್ಥಳೀಯ ಬಸವಾನಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಲಯನ್ಸ್ ಕ್ಲಬ್ ಆಪ್ ಗ್ರೀನ್ ಬೇಸಿನ್ ವತಿಯಿಂದ ನಡೆದ ‘ವಿಶ್ವ ಪಾಲಕರ ದಿನಾಚರಣೆ’ಯಲ್ಲಿ ಮಾತನಾಡಿದರು.
ಮುಖ್ಯ ಅತಿಥಿ ಹನಗಂಡಿಯ ಚನ್ನಬಸವ ಗುರೂಜಿ ಮಾತನಾಡಿ ವಿದ್ಯಾರ್ಥಿಗಳು ಒಳ್ಳೆಯ ನಡತೆ, ಆಚಾರ,ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕು.ಚೆನ್ನಾಗಿ ಓದಿ ಒಳ್ಳೆಯ ಅಂಕ ಪಡೆದು ಸಮಾಜದಲ್ಲಿ ಉನ್ನತ ಸ್ಥಾನದಲ್ಲಿ ವಿದ್ಯಾರ್ಥಿಗಳಿರಬೇಕು ಎಂದರು.
ನಂತರ ಶಾಲಾ ಮಕ್ಕಳು ಪಾಲಕರ ಪಾದಪೂಜೆ ಮಾಡಿದರು. ಎಸ್ಎಸ್ಎಲ್ಸಿಯಲ್ಲಿ ರಾ್ಯಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಖಜಾಂಚಿ ಪ್ರಶಾಂತ ಅಂಗಡಿ, ಜಂಟಿ-ಕಾರ್ಯದರ್ಶಿ ಅಶ್ವಿನಿ ಕೋಳಿಗೂಡ್ದ, ಹುಚ್ಚೇಶ ವಡ್ಡರ, ಸೋಮು ಸಂಶಿ, ಡಾ.ಅಶೋಕ ದಿನ್ನಿಮನಿ, ಸಂದೀಪ ಚಿಕ್ಕೋರ್ಡೇ, ಕಿರಣ ಸಣ್ಣಕ್ಕಿ, ವಿಷ್ಣು ಪಾಟೀಲ, ಪ್ರವೀಣ ನಡಕಟ್ನಿ, ಸಂತೋಷ ತಾಳಿಕೋಟಿ, ಶಿಕ್ಷಕ ಎಸ್ ಕೆ ಗಿಂಡೆ ಸೇರಿದಂತೆ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 