ಬಡವರಿಗೆ ಉತ್ತಮ ಸೇವಾ ಸೌಲಭ್ಯ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್
ಗದಗ 02: ಬಡಜನರಿಗೆ ಶೌಚಾಲಯ, ಸ್ನಾನಗೃಹ, ಬಟ್ಟೆ ತೊಳೆಯುವ ಯಂತ್ರ, ಹೇರ್ ಡ್ರಯರ್, ಮುಂತಾದ ಆಧುನಿಕ ಸೌಲಭ್ಯಗಳನ್ನು ಒಂದೇ ಸೂರಿನಡಿ ಗೌರವಘಟಕವೆಂದು ಸೌಲಭ್ಯ ಒದಗಿಸಿರುವುದು ಉತ್ತಮ ಸೇವಾ ಸೌಲಭ್ಯವಾಗಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಟಿ.ಎಂ. ವಿಜಯಭಾಸ್ಕರ್ ನುಡಿದರು.
ಗದಗ-ಬೆಟಗೇರಿ ನಗರದ ರಾಜೀವ ಗಾಂಧಿ ನಗರದಲ್ಲಿನ ಗೌರವ ಘಟಕಕ್ಕೆ ಅವರು ಭೇಟಿ ನೀಡಿ ಅಲ್ಲಿ ಪುರುಷ ಮತ್ತು ಸ್ತ್ರೀಯರಿಗಾಗಿ ಅತ್ಯಂತ ಕಡಿಮೆ ದರದಲ್ಲಿ ಒದಗಿಸುತ್ತಿರುವ ಶುಚಿ, ಶೌಚ ಸೌಲಭ್ಯಗಳನ್ನು ಪರಿಶೀಲಿಸಿ ಅವರ ಅಧಿಕಾರಿಗಳು ಹಾಗೂ ನಿರ್ವಾಹಕರೊಂದಿಗೆ ಮಾಹಿತಿ ಪಡೆದರು.
ಗೌರವ ಘಟಕದ ವಿದ್ಯುತ್ ಶುಲ್ಕ ಹಾಗೂ ಸಿಬ್ಬಂದಿ ಗೌರವಧನ ಗದಗ ಬೆಟಗೇರಿ ನಗರಸಭೆ ಪಾವತಿಸುತ್ತಿದೆ. ಸುತ್ತಲಿನ ಸಾಮಾನ್ಯ ಕುಟುಂಬಗಳು ಈ ಸೌಲಭ್ಯ ಪಡೆಯುತ್ತಿದ್ದು ಈ ಕುರಿತು ಇನ್ನೂ ಜನರಲ್ಲಿ ಜಾಗೃತಿ ಮೂಡಬೇಕಿದೆ ಎಂದು ಸಿಬ್ಬಂದಿ ತಿಳಿಸಿದರು.
ಇದೊಂದು ನಿಜಕ್ಕೂ ಮಾದರಿ ಸೇವಾ ಸೌಲಭ್ಯವಾಗಿದ್ದು ಸುತ್ತಲಿನ ಬಡಾವಣೆಗಳ ಜನಸಾಮಾನ್ಯರಿಗೆ ಇಲ್ಲಿನ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸಿ ಬಹುಮುಖ್ಯವಾಗಿ ಇದರ ನಿರ್ವಹಣೆಗಾಗಿ ಯೋಗ್ಯ ಸೇವಾ ಶುಲ್ಕ ನಿಯಮಿತವಾಗಿ ಪಡೆಯಲು ವ್ಯವಸ್ಥೆ ಮಾಡಿ ಇದು ನಿರಂತರವಾಗಿ ಶುಚಿತ್ವ ಕಾಯ್ದುಕೊಂಡು ನಡೆದುಕೊಂಡು ಹೋಗುವದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಹಾಗೂ ಮುಖ್ಯವಾಗಿ ಆಧುನಿಕ ಸೌಲಭ್ಯಗಳ ಹೆಸರು, ಹಾಗೂ ಉಪಯೋಗದ ಮಾಹಿತಿಯನ್ನು ಕನ್ನಡ ಭಾಷೆಯ ಫಲಕಗಳನ್ನು ಅಳವಡಿಸಲು ಮುಖ್ಯ ಕಾರ್ಯದಶರ್ಿಗಳು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ , ಜಿ.ಪಂ. ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ. ಆನಂದ ಕೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೆಶಕ ರುದ್ರೇಶ, ಪೌರಾಯುಕ್ತ ಮನ್ಸೂರ ಅಲಿ, ಗುತ್ತಿಗೆದಾರ ಕಂಪನಿ ಪ್ರತಿನಿಧಿಗಳು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 