ಸರ್ಕಾರದ ಪ್ಯಾಕೇಜ್ ಘೋಷಣೆ ಬರೀ ಪ್ರಚಾರಕ್ಕಾಗಿ ಮಾತ್ರ: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಮೇ 10, ಕೊರೊನಾಕ್ಕಾಗಿ ಸರ್ಕಾರ ಬಿಡುಗಡೆ ಮಾಡಿರುವ 1610 ಕೋಟಿ ರೂ.ಪ್ಯಾಕೇಜ್ ಸಹ ನೆರೆ ಪರಿಹಾರದ ಪ್ಯಾಕೇಜ್ನಂತೆ ಬರೀ ಘೋಷಣೆಯಂತಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.ರಾಜರಾಜೇಶ್ವರಿ ವಿಧಾನ ಸಭಾಕ್ಷೇತ್ರದಲ್ಲಿ ಜೆಡಿಎಸ್ ಮುಖಂಡ ಜಿ.ಕೃಷ್ಣ ಮೂರ್ತಿ ಸುಮಾರು 15 ಸಾವಿರ ಬಡವರಿಗೆ ಉಚಿತ ಆಹಾರ ಸಾಮಗ್ರಿಗಳ ವಿತರಿಸಿದರು. ಆಹಾರ ಸಾಮಗ್ರಿಗಳ ವಿತರಣೆಗೆ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಹಲವು ವರ್ಗಗಳಿಗೆ ಪರಿಹಾರ ಘೋಷಣೆ ಮಾಡಿದೆಯಾದರೂ ಆ ವರ್ಗದ ಜನರನ್ನು ಗುರುತಿಸುವ ಕೆಲಸವನ್ನು ಮಾತ್ರ ಮಾಡುತ್ತಿಲ್ಲ. ಅಸಂಘಟಿತ ಕಾರ್ಮಿಕ ವರ್ಗದವರಿಗೆ ಹೇಗೆ ಪರಿಹಾರ ತಲುಪಿಸುತ್ತೀರಿ? ಎಂದು ಪ್ರಶ್ನಿಸಿದರು.ಪ್ರಸಕ್ತ ದಾನಿಗಳಿಂದ ಬಡವರು ಕೊರೊನಾ ಸಂಕಷ್ಟದಲ್ಲಿ ಉಳಿದಿದ್ದಾರೆಯೇ ಹೊರತು, ಸರ್ಕಾರದಿಂದಲ್ಲ. ಜನ ಸಂಕಷ್ಟದಲ್ಲಿದ್ದಾರೆ, ಜನರ ನೆರವಿಗೆ ಬಿಜೆಪಿಗರು ನಿಲ್ಲಬೇಕೇ ಹೊರತು ಈ ಸಂದರ್ಭದಲ್ಲೂ ಲೂಟಿ ಹೊಡೆಯುವ ಕೆಲಸ ಮಾಡಬಾರದು.ಕೊರೋನಾ ಲಾಕ್ ಡೌನ್ ವಿಚಾರದಲ್ಲಿ ಸರ್ಕಾರ ಪ್ರಮಾಣಿಕವಾಗಿ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ಜನರಿಗೆ ದೋಖಾ ಮಾಡುವ ಕೆಲಸ ನಡೆಯುತ್ತಿದೆ. ಪ್ಯಾಕೆಜ್ನಲ್ಲಿ ನಿಜವಾದ ಫಲಾನುಭವಿಗಳಿಗೆ ಇದರ ಲಾಭ ದೊರೆಯುವುದಿಲ್ಲ. ಈ ಯೋಜನೆ ಯಶಸ್ಸು ಕಾಣುವುದಿಲ್ಲ. ಸರ್ಕಾರದ ಈ ಪ್ಯಾಕೇಜ್ ಕೇವಲ ಪ್ರಚಾರದ ಘೋಷಣೆ ಅಷ್ಟೇ. ಯಾವುದೇ ಪೂರ್ವಸಿದ್ಧತೆಯಿಲ್ಲದೇ 1610 ಕೋಟಿ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಇದು ಕೂಡ ನೆರೆ ಪರಿಹಾರದ ರೀತಿಯಲ್ಲಿಯೇ ಆಗುತ್ತದೆ. ನೆರೆಯಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ಪರಿಹಾರ ಕೊಡುವುದಾಗಿ ಸರ್ಕಾರ ಘೋಷಿಸಿತ್ತು. ಆದರೆ ಎಷ್ಟು ಜನರಿಗೆ ಪರಿಹಾರ ಕೊಟ್ಟಿದ್ದಾರೆ? ಅದೇ ರೀತಿ ವಿಶೇಷ ಪ್ಯಾಕೇಜ್ ಕೂಡ ಪ್ರಚಾರಕ್ಕೆ ಸೀಮಿತವಾಗಲಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 