ಸರ್ಕಾರ ರಚನೆ ಸಂಬಂಧ ಎನ್ಸಿಪಿ ಶಾಸಕರ ಸಭೆ: ಷರತ್ತುಬದ್ಧ ಬೆಂಬಲ ನೀಡಲು ನಿರ್ದಾರ
ಮುಂಬೈ, ನ.11 : ಶಿವಸೇನೆಯೊಂದಿಗೆ ಸರ್ಕಾರ ರಚಿಸುವ ಪ್ರಸ್ತಾಪದ ಬಗ್ಗೆ ಚರ್ಚಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ಸೋಮವಾರ ಪಕ್ಷದ ಶಾಸಕರ ಸಭೆ ನಡೆಸಿತು. ಶಿವಸೇನೆಗೆ ಷರತ್ತುಬದ್ಧ ಬೆಂಬಲ ನೀಡಲು ಯೋಜನೆ ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಶಿವಸೇನೆಯು ಬಿಜೆಪಿಯೊಂದಿಗಿನ ಸಂಬಂಧವನ್ನು ಕಸಿದುಕೊಳ್ಳಬೇಕು, ಎನ್ಡಿಎ ಕೂಟದಿಂದ ಹೊರಬರಬೇಕು ಎಂಬ ಷರತ್ತು ಹಾಕಲಾಗಿದೆ ಎನ್ನಲಾಗಿದೆ. ಮಾತ್ರವಲ್ಲ ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ರೂಪಿಸಬೇಕು ಎಂಬ ನಿಬಂಧನೆ ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ. ಮತ್ತೊಂದೆಡೆ, ಕಾಂಗ್ರೆಸ್ನ ಉನ್ನತ ನಾಯಕರು ಕೂಡ ನವದೆಹಲಿಯಲ್ಲಿ ಸಭೆ ನಡೆಸುತ್ತಿದ್ದು, ಹೈಕಮಾಂಡ್ನಿಂದ ಒಪ್ಪಿಗೆ ದೊರೆತ ಬಳಿಕ ಸರ್ಕಾರ ರಚನೆಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 