ಏತ ನೀರಾವರಿಯಿಂದ 137 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸರ್ಕಾರ ಅಸ್ತು
Government approves project to fill 137 lakes with water through lift irrigation
ಏತ ನೀರಾವರಿಯಿಂದ 137 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸರ್ಕಾರ ಅಸ್ತು
ಬ್ಯಾಡಗಿ 06: ತಾಲೂಕ ಹಾಗೂ ಹಾನಗಲ್ ತಾಲೂಕಿನ 137 ಕೆರೆಗಳಿಗೆ ಗುಡ್ಡದ ಮಲ್ಲಾಪುರ ಏತ ನೀರಾವರಿ ಯೋಜನೆಯಿಂದ ಪೈಪ್ ಲೈನ್ ಮೂಲಕ ನೀರು ತುಂಬಿಸುವ ಯೋಜನೆಗೆ ರಾಜ್ಯ ಸರ್ಕಾರ 150 ಕೋಟಿ ರೂ.ಗಳ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಮೊದಲ ಹಂತದಲ್ಲಿ 50 ಕೋಟಿ ರೂ.ಗಳ ಮೊತ್ತದ ಕಾಮಗಾರಿ ಕೈಕೊಳ್ಳಲು ರಾಜ್ಯ ಸಚಿವ ಸಂಪುಟದಿಂದ ಅನುಮತಿ ದೊರೆತಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ತಿಳಿಸಿದ್ದಾರೆ.
ಅವರು ಶುಕ್ರವಾರ ಸುದ್ದಿಗಾರರೊಂದಿಗೆ ವಿಷಯ ಹಂಚಿಕೊಂಡಿದ್ದು, ಈ ಭಾಗದ ಜನರ ಜೀವನಾಡಿಯಾದ ಈ ಗುಡ್ಡದ ಮಲ್ಲಾಪುರ ಏತ ನೀರಾವರಿ ಯೋಜನೆಯು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿತ್ತು, ತಾಲ್ಲೂಕಿನ ಅನೇಕ ಹಳ್ಳಿಗಳ ನೂರಾರು ಕೆರೆಗಳು ನೀರಿನಿಂದ ತುಂಬಿಕೊಂಡು ಸಮೃದ್ಧಗೊಳ್ಳಲಿವೆ. ಇದರಿಂದಾಗಿ ಯೋಜನೆಯ ವ್ಯಾಪ್ತಿಗೆ ಸೇರಲಿರುವ ಗ್ರಾಮೀಣ ಪ್ರದೇಶದ ನೀರಾವರಿ ವ್ಯಾಪ್ತಿಗೆ ಒಳ ಪಟ್ಟ ಭೂಮಿಯಲ್ಲಿ ಅಂತರ್ ಜಲ ಮಟ್ಟ ಹೆಚ್ಚಲಿದ್ದು, ಸಾವಿರಾರು ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಸಿಗುವ ಉದ್ದೇಶದಿಂದತಾಲ್ಲೂಕಿನ ಗುಡ್ಡದ ಮಲ್ಲಾಪುರ ಏತ ನೀರಾವರಿ ಯೋಜಏನೆಏಯನ್ನು ರೂಪಿಸಲಾಗಿದೆ. ಪ್ರತಿ ವರ್ಷ ಜೂನ್ ಜುಲೈ ತಿಂಗಳ ಆರಂಭದಿಂದ ಸತತ ನಾಲ್ಕು ತಿಂಗಳ ಅವಧಿ ವರೆಗೆ ನದಿ ಪ್ರವಾಹ ಬರುವ ಸಮಯದಲ್ಲಿ ನದಿಯಿಂದ ನೀರು ಎತ್ತಿ ಕೆರೆಗಳಿಗೆ ನೀರಿನ ಸೌಲಭ್ಯ ಒದಗಿಸಲಾಗುವುದು.ಪೈಪ್ ಲೈನ್ ಮೂಲಕ ಕೆರೆ ತುಂಬಿಸುವ ಈ ಯೋಜನೆಯು, ಬರಲಿರುವ ಒಂದೇ ವರ್ಷದಲ್ಲಿ ಯೋಜನೆಯ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
ಮಲೆನಾಡ ಭಾಗದ ಕೆರೆಗಳು ಗುಡ್ಡದ ಮಲ್ಲಾಪುರ ಏತ ನೀರಾವರಿ ಯೋಜನೆಯಿಂದ ನೀರು ತುಂಬಿ ನೂರಾರು ರೈತರ ದಶಕದ ಕನಸು ನನಸಾಗಲಿದೆ. ನಾನು ಈ ಭಾಗದ ಜನರಿಗೆ ಶಾಶ್ವತ ಯೋಜನೆ ಮಾಡಬೇಕೆನ್ನುವ ಉದ್ದೇಶದಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಮುಂದಿನ ಹಂಗಾಮಿನಿಂದಲೇ ಈ ಭಾಗದಲ್ಲಿರುವ ಗ್ರಾಮದ ಕೆರೆಗಳಿಗೆ ಈ ಯೋಜನೆಯ ಮೂಲಕ ನೀರು ಹರಿಸಲಾಗುತ್ತಿದೆ. ಈ ಗುಡ್ಡದ ಮಲ್ಲಾಪುರ ಏತ ನೀರಾವರಿ ಯೋಜನೆಯ ಅನುಷ್ಠಾನಕ್ಕೆ ಸಹಕಾರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವ ಸಂಪುಟದ ಎಲ್ಲ ಸಚಿವರಿಗೆ ಹಾಗೂ ಈ ಯೋಜನೆಯ ಫಲಾನುಭವಿಗಳಾದ ರೈತರಿಗೆ ಸೇರಿದಂತೆ ಎಲರಿಗೂ ಶಾಸಕರು ಧನ್ಯವಾದಗಳನ್ನು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 